ಬೆಂಗಳೂರು:ವಿಧಾನ ಸಭಾಧ್ಯಕ್ಷ ಯು ಟಿ ಖಾದರ್‌ ದೈವಗಳ ಹರಕೆಕೋಲ ನೆರವೇರಿಸಿದ್ದಾರೆ. ಈ  ಹಿನ್ನೆಲೆಯಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್  ಅವರು ಭಾಗವಹಿಸಿ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು.

ಕೋಲ ನೆರವೇರಿಸಿದ ಯು ಟಿ ಖಾದರ್ ವಿರುದ್ಧ ಆಕ್ರೋಶ:‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ‌. ಪ್ರಸಾದ ಪಡೆದು ತಲೆಗೆ ಮತ್ತಿಕೊಂಡು ನರಕಕ್ಕೆ ಹೋಗಲಿ‌. ಅದು ಆತನ ವೈಯಕ್ತಿಕ ಸ್ವತಂತ್ರ‌. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದು ಮುಸ್ಲಿಂ ಧಾರ್ಮಿಕ ಮುಖಂಡನ ಕೆಂಗಣ್ಣಿಗೆ ಗುರಿಯಾಗಿದೆ. ಒರ್ವ ಮುಸ್ಲಿಂನಾಗಿ ದೈವಗಳ ಕೋಲಾ ನೇರವೇರಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪೋಸ್ಟ್ ಮಾಡಿರುವ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ. ಇದಕ್ಕೆ ಪರ-ವಿರೋಧ ಅಭಿಪ್ರಾಯಗಳು ಬಂದಿವೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × one =
Remember me
