ರಾಯಚೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೊಟಿ ರೂಪಾಯಿ ಹಗರಣದ ಬಗ್ಗೆ ರಾಜ್ಯದ ಶಾಸಕರು ಮೌನವಾಗಿದ್ದಾರೆ. ನಾನು ಸದನದಲ್ಲಿದಿದ್ದರೆ ತಪ್ಪು ಮಾಡುವವರ ಮುಖಕ್ಕೆ ಹೊಡೆಯುತ್ತಿದ್ದೆ ಎಂದು ಮಾಜಿ ಶಾಸಕ ಕೆ.ಶಿವನಗೌಡ ನಾಯಕ ಗುಡುಗಿದ್ದಾರೆ.
ಇದನ್ನೂ ಓದಿ:ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತ: ಮೃತರಿಗೆ ₹20 ಲಕ್ಷ, ಗಾಯಾಳುಗಳಿಗೆ ₹3 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ
ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ವಿಧಾನಸೌಧದಲ್ಲಿ ಕುಳಿತ ಶಾಸಕರು ತಮ್ಮ ಇಂದ್ರೀಯಗಳನ್ನು ನಿಯಂತ್ರಿಸಿಕೊಂಡಿದ್ದಾರೆ. ಇಂತಹ ರಾಜಕಾರಣವನ್ನು ನೋಡಿದರೆ ನಾಚಿಕೆಯಾಗುತ್ತದೆ. ಸದನದಲ್ಲಿ ನಾನಿದ್ದರೆ ಹಗರಣದಲ್ಲಿ ಭಾಗಿಯಾಗಿರುವವರ ಕುರ್ಚಿ ಬಳಿ ಹೋಗಿ ಮುಖಕ್ಕೆ ಹೊಡೆಯುತ್ತಿದ್ದೆ ಎಂದು ಹೇಳಿದ್ದಾರೆ.
ಕೋಲಾರ:ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.
ಹೆಚ್ಚುವರಿ ಡಿಸಿಎಂ ಹುದ್ದೆ: ಹೈಕಮಾಂಡ್‌ ಬಳಿ ಹೋಗಿ ಮಾತನಾಡಲಿ ಎಂದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
