ಬಾಗಲಕೋಟೆ:ಇಲ್ಲಿನ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್​ ಕಡೆಗೂ ಟಿಕೆಟ್​ನಿಂದ ವಂಚಿತರಾದರು. ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲಗೆ ಕಾಂಗ್ರೆಸ್​ ಅಂತಿಮವಾಗಿ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಕಣ್ಣೀರಿಟ್ಟ ವೀಣಾ ಇಂದಿಗೂ ತಮ್ಮ ಅಸಮಾಧಾನದಿಂದ ಹೊರಬಂದಿಲ್ಲ. ಸದ್ಯ ಇದು ಕೈ ನಾಯಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಇದನ್ನೂ ಓದಿ:ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ ಪ್ರಕಟ: ಏಪ್ರಿಲ್ 1ರಂದು ಚಿತ್ರದುರ್ಗದಲ್ಲಿ ಪ್ರದಾನ
ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ ಕಾಂಗ್ರೆಸ್ ಟಿಕೆಟ್ ಹಂಚಿಕೆಯ ಅಸಮಧಾನ ಅಂತ್ಯಗೊಂಡಿಲ್ಲ. ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಅಳಲು ತೋಡಿಕೊಂಡ ವೀಣಾ ಕಾಶಪ್ಪನವರ್, ನನಗೆ ಟಿಕೆಟ್ ಕೊಡಬೇಕಿತ್ತು. ಆದರೆ ಅದು ನಡೆದಿಲ್ಲ. ಹಾಗಂತ ನಾನು ಚುನಾವಣಾ ಸ್ಪರ್ಧೆಯಿಂದ ಹೊರಗುಳಿಯಲ್ಲ. ಖಂಡಿತ ಅಖಾಡದಲ್ಲಿ ಇದ್ದೇ ಇರ್ತಿನಿ ಎಂದು ಶಪಥ ಮಾಡಿದ್ದಾರೆ.​ವೀಣಾ ಹೇಳಿಕೆಯ ಬೆನ್ನಲ್ಲೇ ಸ್ವತಂತ್ರವಾಗಿ ಅಖಾಡಕ್ಕೆ ಇಳಿಯುವಂತೆ ಬೆಂಬಲಿಗರು ಒತ್ತಾಯಿಸಿದ್ದು, ಕಾಶಪ್ಪನವರ ದಂಪತಿ ಅಸಮಧಾನದ ಚಂಡು ಸಿಎಂ ಅಂಗಳಕ್ಕೆ ಬಂದು ಬಿದ್ದಿದೆ. ಇಂದು ಸಂಜೆಯೇ ಈ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸಭೆ ನಡೆಯಲಿದೆ. ಸಭೆಗೆ ಕಾಶಪ್ಪನವರ ದಂಪತಿ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಭಾಗಿಯಾಗಲಿದ್ದಾರೆ.
ಅದೊಂದು ಪಾತ್ರ ನಾನು ಒಪ್ಪಬಾರದಿತ್ತು! ಆ ತಪ್ಪಿಂದ ನನ್ನ ಆಸೆಯೇ ನುಚ್ಚುನೂರಾಯ್ತು: ನಟಿ ಅರ್ಚನಾ

ಬಾಳೆಹಣ್ಣಿನ ವಿಷಯದಲ್ಲಿ ಈ ತಪ್ಪನ್ನು ಮಾಡಲೇಬೇಡಿ! ಇಲ್ಲಿದೆ ಉಪಯುಕ್ತ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 8 =
Remember me
