ಬೆಂಗಳೂರು:ನಿನ್ನೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಉದ್ದೇಶಿಸಿ ಪತ್ರ ಬರೆದಿದ್ದರು. ಅದರಲ್ಲಿ ಯಾವ ರೀತಿ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ಹೆಚ್ಚಿನ ಮಹಿಳೆಯರು ಆಗಮಿಸುತ್ತಿದ್ದು ಶಕ್ತಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಬರೆದಿದ್ದರು.
ಇದೀಗ ಇದೇ ವಿಚಾರ ಕಲಾಪದಲ್ಲೂ ಪ್ರತಿಧ್ವನಿಸಿದೆ. ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಮುಖ್ಯಂತ್ರಿ ಸಿದ್ದರಾಮಯ್ಯ, “ನಮ್ಮ ಸರ್ಕಾರದಿಂದ ರಾಜ್ಯದ ಜನ ಸಂತುಷ್ಠರಾಗಿದ್ದಾರೆ. ಧರ್ಮಸ್ಥಳ ಧರ್ಮಧಿಕಾರಿ ವಿರೇಂದ್ರ ಹೆಗ್ಗಡೆಯವರು ನಮ್ಮ ಯೋಜನೆಯನ್ನ ಮೆಚ್ಚಿ ಪತ್ರ ಬರೆದಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಮಂಡಿಸಿದ 14ನೇ ಬಜೆಟ್​ ಶ್ಲಾಘಿಸಿ ವೀರೇಂದ್ರ ಹೆಗ್ಗಡೆ ಪತ್
ಶಕ್ತಿ ಯೋಜನೆಯಿಂದ ಧರ್ಮಸ್ಥಳಕ್ಕೆ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ನನ್ನ ಹೆಸರಲ್ಲಿ ಪೂಜೆ ಮಾಡಿಸುತ್ತಿದಾರೆ ಎಂದು ಪತ್ರಬರೆದಿದ್ದಾರೆ. ನೀವೇ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ದೀರಾ.  ಆದರೆ ಸತ್ಯ ಏನಿದೆ, ವಾಸ್ತಾವಂಶ ಏನಿದೆ ಅದನ್ನ ಹೇಳಿದ್ದಾರೆ. ಏನಮ್ಮ ಅವರು ಹೇಳಿದ್ದಾರಲ್ವಾ?” ಎಂದು ಬಿಜೆಪಿಯ ಭಾರತಿ ಶೆಟ್ಟಿಗೆ ಕೇಳಿದ್ದಾರೆ. ಈ ಸಂದರ್ಭ ವಿಧಾನಸಭಾ ಸದಸ್ಯೆ ಭಾರತಿ ಶೆಟ್ಟಿ ಹೌದು ಹೌದು ಎಂದು ತಲೆಯಾಡಿಸಿದ್ದಾರೆ.
ಆಗ ಪ್ರತ್ಯುತ್ತರ ನೀಡಿದ ಭಾರತಿ ಶೆಟ್ಟಿ, “ಆದರೆ ಕಾಂಗ್ರೆಸ್‌ನಲ್ಲಿ ಸಂತುಷ್ಠರಾಗಿಲ್ಲ. ಪರಿಷತ್ತಿನಲ್ಲಿ ಒಬ್ಬರೇ ಒಬ್ಬರು ಮಹಿಳೆ ಇಲ್ಲ, ಮುಂದಿನ ದಿನಗಳಲ್ಲಿ ಇಬ್ಬರು ಮಹಿಳೆಯರನ್ನಾದ್ರು ಪರಿಷತ್ತಿನಲ್ಲಿ ನೇಮಕ ಮಾಡಿ” ಎಂದು ಕಾಲೆಳೆದಿದ್ದಾರೆ. ಆಗ ಮಾತನಾಡಿದ ತೇಜಸ್ವಿನಿ ಗೌಡ “ನಾವು ಮಹಿಳೆಯರ ವಿಚಾರಕ್ಕೆ ಬಂದ್ರೆ ಪಕ್ಷ ಭೇದ ಮರೆತು ಒಂದಾಗ್ತೀವಿ. ಪರಿಷತ್ತಿನಲ್ಲಿ ಕಾಂಗ್ರೆಸ್‌ನಿಂದ ಒಂದಿಬ್ಬರನ್ನ ನೇಮಿಸಿ” ಎಂದಿದ್ದಾರೆ.
ಇದನ್ನೂ ಓದಿ:ಸಮುದಾಯ ಅಭಿವೃದ್ಧಿಗೆ ಡಾ. ವೀರೇಂದ್ರ ಹೆಗ್ಗಡೆ ಅವರ ಧರ್ಮಸ್ಥಳ ಸಂಸ್ಥೆ ಮಾದರಿ
ಅದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮ್ಯ “ಹೌದಮ್ಮ ತೇಜಸ್ವಿನಿ ಗೌಡ, ಪಾರ್ಲಿಮೆಂಟಿನಲ್ಲಿ ಶೇ 33ರಷ್ಟು ಮಹಿಳಾ ಮೀಸಲಾತಿಯ ಬಿಲ್ ಬಾಕಿ ಇದೆ. ಅದನ್ನ ಕೂಡಲೇ ಮಾಡಿಸಮ್ಮ” ಎಂದು ಕೈ ಮುಗಿದು ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 14 =
Remember me
