ಬೆಂಗಳೂರು:ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಮೂರು ರಾಜಕೀಯ ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ:ಆಘಾತಕಾರಿ ಘಟನೆ: ಯುವಕನ ದೇಹ ಕತ್ತರಿಸಿ ಖಾಲಿ ಜಾಗದಲ್ಲಿ ಎಸೆದ ಸ್ನೇಹಿತರು
ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್.ಭೋಸರಾಜು, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮುಳೆ ಮಾರುತಿರಾವ್ ಹಾಗೂ ಜೆಡಿಎಸ್​ನಿಂದ ಟಿ.ಎನ್.ಜವರಾಯಿಗೌಡ ಅವರು ಆಯ್ಕೆ ಆಗಿರುವ ಅಭ್ಯರ್ಥಿಗಳು.
ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಜೂ.13ರಂದು ಚುನಾವಣೆ ನಡೆಯಬೇಕಿತ್ತು. 11 ಸ್ಥಾನಗಳಿಗೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ, ಆಸಿಫ್ ಪಾಷಾ ಎಂಬವರು ಸಲ್ಲಿಕೆ ಮಾಡಿದ್ದ ನಾಮಪತ್ರದಲ್ಲಿ ಸೂಚಕರಿಲ್ಲದ ಕಾರಣ ತಿರಸ್ಕೃತಗೊಳಿಸಲಾಗಿತ್ತು. ಗುರುವಾರ(ಜೂ.6) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಯಾರೊಬ್ಬರೂ ನಾಮಪತ್ರ ಹಿಂಪಡೆಯದೆ ಇದ್ದುದ್ದರಿಂದ ಕಣದಲ್ಲಿದ್ದ ಎಲ್ಲ 11 ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.
ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 3 =
Remember me
