ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತ ನಿಖಿಲ್​ ಕುಮಾರಸ್ವಾಮಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಖಾಡಕ್ಕಿಳಿಯೋದು ಬಹುತೇಕ ಖಚಿತವಾಗಿದೆ. ಆದರೆ, ಯಾವ ಕ್ಷೇತ್ರದಿಂದ ಎಂಬುದು ಇನ್ನೂ ಅಧಿಕೃತವಾಗಿಲ್ಲವಾದರೂ ರಾಮನಗರದತ್ತ ಎಲ್ಲರ ಚಿತ್ತ ಮೂಡಿದೆ.
ಅನಿತಾ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಕ್ಷೇತ್ರದಿಂದಲೇ ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ. ರಾಮನಗರದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ವೇ ಮಾಡಿಸಿದ್ದು, ಮುಖಂಡರ ಅಭಿಪ್ರಾಯವನ್ನೂ ಸಂಗ್ರಹಿಸಿದ್ದಾರಂತೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಭಲ ಪೈಪೋಟಿ ನೀಡಲಿದೆ. ಅನಿತಾ ಕುಮಾರಸ್ವಾಮಿಗಿಂತ ನಿಖಿಲ್ ಸ್ಪರ್ಧೆ ಮಾಡಿದರೆ ಸೂಕ್ತ ಎಂಬ ವರದಿ ಬಂದಿದೆಯಂತೆ.
ಹಾಗಾಗಿ ಅಂತಿಮವಾಗಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಲು ಎಚ್​ಡಿಕೆ ತಯಾರಿ ನಡೆಸಿದ್ದಾರಂತೆ. ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡುವ ಬದಲು 2ನೇ ಪಟ್ಟಿಯಲ್ಲಿ ಘೋಷಣೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಆ್ಯಕ್ಟಿವ್​ ಆಗಿದ್ದು, ಪುತ್ರನಿಗಾಗಿ ಕ್ಷೇತ್ರ ಬಿಟ್ಟಕೊಡಲು ತಂದೆ- ತಾಯಿ ತೀರ್ಮಾನಿಸಿದ್ದಾರೆ.
ನಿಮ್ಮನ್ನು ನೋಡ್ಬೇಕು ಬನ್ನಿ ಎಂದು ಗೋಗರೆದರೂ ಹಾಸ್ಟೆಲ್​ಗೆ ಬಾರದ ಅಪ್ಪ-ಅಮ್ಮ… ಬೆಂಗಳೂರಲ್ಲಿ ಬಿಇ ವಿದ್ಯಾರ್ಥಿ ದುರಂತ ಅಂತ್ಯ

ಮಗನಿಂದಲೇ ತಾಯಿಗೆ ಮಹಾ ಮೋಸ: ಮಂಚದ ಮೇಲೆ ಮಲಗಿಕೊಂಡೇ ಎಸಿ ಕೋರ್ಟ್​ಗೆ ಬಂದ ವೃದ್ಧೆ! ಕೊಳ್ಳೇಗಾಲದಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
