ಬೆಂಗಳೂರು:ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್​ ಸಹಭಾಗಿತ್ವದಲ್ಲಿ ಫೆ.19 ರಂದು ಸಂಜೆ 5 ಗಂಟೆಯಿಂದ ಕಬ್ಬನ್​ ಪಾರ್ಕ್​ ಎದುರಿಗಿರುವ ಎಂ.ಎಸ್​. ಬಿಲ್ಡಿಂಗ್​ನ ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಿಗಳ ಸಂಘದ ಸಭಾಂಗಣದಲ್ಲಿ ‘ಸಂಗೀತ ಸಂಜೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹೆಸರಾಂತ ಸಂಗೀತಗಾರರು ‘ಸಂಗೀತ ಸಂಜೆ’ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಖ್ಯಾತ ಸಿತಾರ್ ವಾದಕ ಉಸ್ತಾದ್ ರಫೀಕ್ ಖಾನ್, ಅಂಕುಶ್ ನಾಯಕ್ ಪಾಲ್ಗೊಳ್ಳಲಿದ್ದಾರೆ. ಅಂತೆಯೇ ಕಲಾವಿದರಾದ ರಾಜೇಂದ್ರ ನಾಯಕ್ ಹಾಗೂ ಕೇಶವ್ ಜೋಶಿ (ತಬಲ), ಪದ್ಮಶ್ರೀ ವೆಂಕಟೇಶ್ ಕುಮಾರ್ (ಹಾಡುಗಾರಿಕೆ), ನರೇಂದ್ರ ಎಲ್ ನಾಯಕ್ (ಹಾರ್ಮೋನಿಯಂ) ಸಂಗೀತ ಪ್ರಿಯರನ್ನು ರಂಜಿಸಲಿದ್ದಾರೆ. ಸಂಗೀತ ಮಾಂತ್ರಿಕರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನಿಮಗೆ ಆತ್ಮೀಯವಾಗಿ ಆಹ್ವಾನವನ್ನು ನೀಡುತ್ತಿದ್ದೇವೆ.
ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ಶಿವಮೂರ್ತಿ -8884432389, ಸದಾಶಿವ್ -6363933258, ಅಖಿಲೇಶ್ -9986172645 ಸಂಪರ್ಕಿಸಬಹುದು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಲಿಂಕ್​ ಮೇಲೆ ಕ್ಲಿಕ್ಕಿಸಿ ಈಗಲೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + six =
Remember me
