ಬೆಂಗಳೂರು:ಪಾದಾರಾಯನಪುರ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ್ದಲ್ಲಿ ಯಾವುದೇ ರಾಜಕೀಯ ದುರುದ್ದೇಶವಿರಲಿಲ್ಲ. ಬೆಂಗಳೂರಿಗೆ ರಾಮನಗರ ಸಮೀಪವಾಗಿದ್ದರಿಂದ ಹಾಗೂ ಆರೋಪಿಗಳನ್ನು ಪ್ರತ್ಯೇಕವಾಗಿ ಇಡಬೇಕಾಗಿದ್ದರಿಂದ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಯಿತು. ಅದರಿಂದ ಜಿಲ್ಲೆಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್​ ಅವರು ತಿಳಿಸಿದರು.
ವಿಜಯವಾಣಿ ಏರ್ಪಡಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯವು ಕರೊನಾ ವಿರುದ್ಧ ಸರಿಯಾದ ನಿಟ್ಟಿನಲ್ಲಿ ಹೋರಾಡುತ್ತಿದೆ. ಕರೊನಾ ಸೋಂಕಿನಲ್ಲಿ 2ನೇ ಸ್ಥಾನದಲ್ಲಿದ್ದ ರಾಜ್ಯ ಇಂದು 12ನೇ ಸ್ಥಾನದಲ್ಲಿದೆ ಅಂದರೆ ಅದಕ್ಕೆ ಕಾರಣ ರಾಜ್ಯ ಸರ್ಕಾರದ ಉತ್ತಮ ಕ್ರಮಗಳು ಎಂದರು.
ಇದನ್ನೂ ಓದಿ:ತಾಯಿಯನ್ನು ಜೀವಂತ ಸಮಾಧಿ ಮಾಡಿದ ಮಗ, 3 ದಿನಗಳ ನಂತರ ಕಾದಿತ್ತೊಂದು ಅಚ್ಚರಿ!
ಇದೇ ವೇಳೆ ರಾಮನಗರ ಜಿಲ್ಲಾ ವ್ಯಾಪ್ತಿಯ ಮಾಗಡಿ, ಬಿಡದಿ ಹಾಗೂ ಹಾರೋಹಳ್ಳಿ ಸೇರಿದಂತೆ ವಿವಿಧ ಪ್ರದೇಶದ ಜನರು ದೂರವಾಣಿ ಕರೆ ಮಾಡಿ ಆಹಾರ ಕಿಟ್, ಔಷಧ ಸೇರಿದಂತೆ ಅನೇಕ ಸಮಸ್ಯೆಗಳನ್ನು ಅಧ್ಯಕ್ಷರ ಬಳಿ ಹೇಳಿಕೊಂಡರು. ವಿಶೇಷವಾಗಿ ಬೊಂಬೆಯ ನಾಡೆಂದು ಕರೆಯುವ ಚನ್ನಪಟ್ಟಣದ ಟಾಯ್ಸ್​ ಎಂಪೋರಿಯಂ ಕಾರ್ಮಿಕರ ಸಮಸ್ಯೆಯನ್ನು ಸಿಎಂ ಬಳಿ ಚರ್ಚಿಸುವ ಭರವಸೆ ನೀಡಿದರು.
ಕರೆ ಮಾಡಿದ ಪ್ರತಿಯೊಬ್ಬರಿಗೂ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ರುದ್ರೇಶ್ ಅವರಿಗೆ ನೀವು ಉತ್ತಮ ಕೆಲಸ ಮಾಡುತ್ತಿದ್ದೀರಿ ಎಂದು ಜನರು ಅಭಿನಂದನೆ ಸಲ್ಲಿಸಿದರು. ಫೋನ್ ಇನ್ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಶನಿವಾರದ ‘ವಿಜಯವಾಣಿ’ ಸಂಚಿಕೆಯಲ್ಲಿ ಪ್ರಕಟವಾಗಲಿದೆ.
ಇದನ್ನೂ ಓದಿ:ಕರೊನಾ ಸೋಂಕಿತ ಬಾಗಲಕೋಟೆ ಗರ್ಭಿಣಿಯ ಗರ್ಭಪಾತಕ್ಕೆ ವೈದ್ಯರು ಮುಂದಾಗಿದ್ದೇಕೆ?
https://www.facebook.com/VVani4U/videos/271104530733112/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
