ಬೆಂಗಳೂರು: ಲಾಕ್​ಡೌನ್​ನಿಂದ ಪರಿತಪಿಸುತ್ತಿದ್ದ ಕೂಲಿ ಕಾರ್ಮಿಕರಿಗೆ ಸ್ವಂತ ಊರುಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿದೆ.
ವಲಸೆ ಹಾಗೂ ಕೂಲಿ ಕಾರ್ಮಿಕರನ್ನು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಸ್ವಂತ ಊರಿಗೆ ಕಳುಹಿಸಲು ವ್ಯವಸ್ಥೆ ಕಲ್ಪಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್​ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರ ಏ.20ರಂದು ಹೊರಡಿಸಿದ ಆದೇಶದಲ್ಲಿ ರಾಜ್ಯದೊಳಗೆ ಕಾರ್ಮಿಕರನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿದೆ. ಹೀಗಾಗಿ ರಾಜ್ಯದಲ್ಲಿರುವ ಗ್ರಾಮಗಳಿಗೆ ಕಾರ್ಮಿಕರು ತೆರಳಬಹುದಾಗಿದೆ. ಆದರೆ ಅಂತಾರಾಜ್ಯಗಳಿಗೆ ತೆರಳಲು ಅವಕಾಶ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಶೇ.40ರ ಅನುಪಾತದಲ್ಲಿ ಕಾರ್ಮಿಕರನ್ನು ಸ್ಥಳಾಂತರಿಸಬೇಕು. ಕಾರ್ಮಿಕರಿಗೆ ಸ್ಯಾನಿಟೈಸರ್​, ಮಾಸ್ಕ್​ ವಿತರಿಸಬೇಕು. ಎಲ್ಲ ರೀತಿಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ವಲಸೆ ಹಾಗೂ ಕೂಲಿ ಕಾರ್ಮಿಕರು ತಮ್ಮ ಊರುಗಳಲ್ಲಿ ಕೃಷಿ ಚಟುವಟಿಕೆ ಹಾಗೂ ಇತರ ಕೆಲಸ ಮಾಡಲು ನಿರ್ಧರಿಸಿರುವುದರಿಂದ ಅವರನ್ನು ಕಳುಹಿಸಿಕೊಡಲು ಕೇಂದ್ರ ಸರ್ಕಾರ ಆದೇಶಕ್ಕೆ ತಿದ್ದುಪಡಿ ಮಾಡಿದೆ.
VIDEO|ಗಾಳಿಪಟದ ದಾರದಲ್ಲಿ ಸಿಲುಕಿದ್ದ ಪಾರಿವಾಳ ರಕ್ಷಿಸಿದ ಕಂದಾಯ ಸಚಿವ ಆರ್​. ಅಶೋಕ್​

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:8 + 13 =
Remember me
