| ದೇವರಾಜ್ ಎಲ್. ಬೆಂಗಳೂರು
ಶಾಲೆಗಳ ಬಂದ್ ಆಗಿರುವುದರಿಂದ ಮನೆಯಲ್ಲಿ ಹೆಚ್ಚಾಗಿ ಕಾಲ ಕಳೆಯುತ್ತಿರುವ ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವ ಪ್ರಕರಣಗಳು ವರದಿಯಾದ ಬೆನ್ನಲ್ಲೇ, ಆನ್​ಲೈನ್ ಪಾಠದ ನೆಪದಲ್ಲಿ ಮೊಬೈಲ್ ಹಾಗೂ ಲ್ಯಾಪ್​ಟಾಪ್​ಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿರುವ ವಿಚಾರ ಬಹಿರಂಗವಾಗಿರುವುದು ಪಾಲಕರನ್ನು ಇನ್ನಷ್ಟು ಚಿಂತೆಗೀಡು ಮಾಡಿದೆ.
ಶಾಲೆಗಳ ಆರಂಭ ಅನಿಶ್ಚಿತತೆಯಿಂದ ಕೂಡಿರುವುದರಿಂದ ಖಾಸಗಿ ಶಾಲೆಗಳು ಆನ್​ಲೈನ್ ಶಿಕ್ಷಣ ಆರಂಭಿಸಿವೆ. ಆದರೆ ವಿದ್ಯಾರ್ಥಿಗಳು ಕ್ಲಾಸ್ ನೆಪದಲ್ಲಿ ಜಾಲತಾಣಗಳಲ್ಲಿ ಬರುವ ಸೆಕ್ಸ್ ವೀಡಿಯೋಗಳನ್ನು ನೋಡುವ ಚಟಕ್ಕೆ ಬೀಳುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಮಕ್ಕಳು ಬಳಕೆ ಮಾಡಿರುವ ಮೊಬೈಲ್ ಫೋನ್​ಗಳಲ್ಲಿನ ಬ್ರೋಸರ್ ಹಿಸ್ಟರಿ ಪರಿಶೀಲಿಸಿದಾಗಿ ಈ ವಿಚಾರ ಗಮನಕ್ಕೆ ಬಂದಿದೆ.
ಆನ್​ಲೈನ್ ಕ್ಲಾಸ್ ನೆಪದಲ್ಲಿ ಮಕ್ಕಳು ಫೋನ್​ಗಳನ್ನು ಪಡೆದು ಕ್ಲಾಸ್ ಮುಗಿದ ಬಳಿಕ ಗೇಮ್್ಸ ಆಡುತ್ತಿದ್ದರು. ಆದರೆ ಇದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿರುವ 8ರಿಂದ 12ನೇ ತರಗತಿಗಳ ವಿದ್ಯಾರ್ಥಿಗಳು ಅಶ್ಲೀಲ ವೀಡಿಯೋ ಅಪ್​ಲೋಡ್ ಆಗಿರುವ ವೆಬ್​ಸೈಟ್​ಗೆ ಭೇಟಿ ನೀಡುತ್ತಿದ್ದಾರೆ. ಈ ವಿಚಾರವಾಗಿ ನೇರವಾಗಿ ಮಕ್ಕಳ ಎದುರು ಪ್ರಶ್ನಿಸಲು ಮುಜುಗರ ಪಟ್ಟಿಕೊಳ್ಳುವ ಪಾಲಕರು, ಮಕ್ಕಳನ್ನು ಈ ಚಟದಿಂದ ಹೊರತರಲು ಮಕ್ಕಳ ಸಹಾಯವಾಣಿ ಹಾಗೂ ಮಕ್ಕಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮಕ್ಕಳ ಹಕ್ಕುಗಳ ಸಂಸ್ಥೆಗಳಿಗೆ ಮೊರೆ ಹೋಗುತ್ತಿದ್ದಾರೆ. ಮೊದಲಿಗೆ ಗೇಮ್ಸ್​ಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದ ಮಕ್ಕಳು ಅಲ್ಲಿ ಅರೆ ಬರೆ ಬಟ್ಟೆ ಹಾಕಿರುವ ಕಾರ್ಟೂನ್​ಗಳನ್ನು ನೋಡಿ ಸೆಕ್ಸ್ ಎಂಬ ಸಾಧಾರಣ ವಿಷಯವನ್ನು ಹೆಚ್ಚು ಸರ್ಚ್ ಮಾಡುತ್ತಿದ್ದಾರೆ.
ಪಾಲಕರು ಏನು ಮಾಡಬೇಕು
ಶೀಘ್ರ ಶಾಲೆ ಆರಂಭದ ಸ್ಪಷ್ಟ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಶಾಲೆ ಮತ್ತು ಪಿಯು ಕಾಲೇಜು ಪ್ರಾರಂಭಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಜತೆ ಮೊದಲ ಸಭೆ ನಡೆದಿದ್ದು, ನಾಲ್ಕೈದು ದಿನದಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳಲಿದೆ. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್​ಡಿಎಂಸಿ), ವಿವಿಧ ಇಲಾಖೆ ಹಾಗೂ ಖಾಸಗಿ ಶಾಲಾಡಳಿತ ಮಂಡಳಿಗಳ ಅಭಿಪ್ರಾಯ ಸಂಗ್ರಹಿಸಿ, ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿ, ನಾಲ್ಕೈದು ದಿನದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಚಿವರು ನಿರ್ಧರಿಸಿದ್ದಾರೆ. ಬುಧವಾರ ಶಾಲೆ ಆರಂಭ ಕುರಿತು ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ (ಎಸ್​ಡಿಎಂಸಿ)ಗಳ ಜತೆಗೆ ಸಚಿವರು ಸಭೆ ನಡೆಸಿದರು.
ಆಯುಕ್ತರಿಗೆ ಸೂಚನೆ:ಶಾಲಾರಂಭಕ್ಕೆ ಸಂಬಂಧಿಸಿದಂತೆ ಸ್ಥಳೀಯವಾಗಿ ಪರಿಸ್ಥಿತಿ ಹೇಗಿದೆ? ಮತ್ತು ಇಲಾಖಾವಾರು ಅಧಿಕಾರಿಗಳ ಅಭಿಪ್ರಾಯ ಏನು? ಎಂಬುದನ್ನು ಸಂಗ್ರಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಹೊಣೆ ನೀಡಲಾಗಿದೆ.
ನೀತಿ ಸಂಹಿತೆ ಕಳೆದ ಬಳಿಕ ವರ್ಗಾವಣೆ:ಚುನಾವಣೆ ನೀತಿ ಸಂಹಿತೆ ಹಾಗೂ ವಿವಿಧ ಕಾರಣಕ್ಕೆ ಶಿಕ್ಷಕರ ವರ್ಗಾವಣೆ ವಿಳಂಬವಾಗುತ್ತಿದೆ. ಉಪಚುನಾವಣೆ ಸಂಬಂಧ ಜಾರಿಯಲ್ಲಿರುವ ನೀತಿ ಸಂಹಿತೆ ಮುಗಿದ ತಕ್ಷಣವೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲಿದ್ದೇವೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 12 =
Remember me
