ಬೆಂಗಳೂರು:ಜಲ ಸಂತ ಎಂದೇ ಖ್ಯಾತರಾಗಿದ್ದ ಜಲಮರುಪೂರಣ ತಜ್ಞ ಅಯ್ಯಪ್ಪ ಮಸಗಿ (67) ಗುರುವಾರ ಹೃದಯಾಘಾತದಿಂದ ನಿಧನರಾದರು.
ಇದನ್ನೂ ಓದಿ:ಕಿಂಗ್ ನಾಗಾರ್ಜುನ ಕುಬೇರ’ ಫಸ್ಟ್‌ ಲುಕ್ ನೋಡಿ ಫ್ಯಾನ್ಸ್ ಫುಲ್ ಥ್ರಿಲ್!
ನಗರದ ಏರ್‌ಪೋರ್ಟ್ ರಸ್ತೆಯ ಬ್ಯಾಟರಾಯನಪುರದ ಅಮೃತಹಳ್ಳಿಯ ನಿವಾಸದಲ್ಲಿ ಸಂಜೆ ದಿಢೀರ್ ಅಸ್ವಸ್ಥರಾದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದರು ಎಂದು ವೈದ್ಯರು ದೃಢಪಡಿಸಿದರು. ಮೃತರು ಪತ್ನಿ ಶಾರದಾದೇವಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ನಾಡಿನ ಉದ್ದಗಲಕ್ಕೂ ಬೋರ್‌ವೆಲ್ ರೀಚಾರ್ಜ್ ಮಾಡಲು ವಿಶೇಷ ರೀತಿಯಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸಿ ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿದ್ದರು. ಕರ್ನಾಟಕ, ಆಂಧ್ರ, ರಾಜಸ್ಥಾನ ಸೇರಿ ಹಲವು ರಾಜ್ಯ ಸರ್ಕಾರಗಳ ಇಲಾಖೆಗಳಲ್ಲಿ ಜಲ ಸಂರಕ್ಷಣೆ ಕಾರ್ಯಕ್ರಮದಲ್ಲಿ ಸಲಹೆಗಾರರಾಗಿ ಕೆಲಸ ನಿರ್ವಹಿಸಿದ್ದರು.
ಮೂಲತಃ ಮೆಕಾನಿಕಲ್ ಇಂಜಿನಿಯರ್ ಆಗಿದ್ದ ಅಯ್ಯಪ್ಪ ಮಸಗಿ ಅವರು ಎಲ್ ಆ್ಯಂಡ್ ಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಬಳಿಕ ಅವರು ತಮ್ಮದೇ ಜಲ ಸಾಕ್ಷರತಾ ಪ್ರತಿಷ್ಠಾನ ಹೆಸರಿನಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಸಲಹೆ-ಸೂಚನೆ ನೀಡುತ್ತಿದ್ದ ಅವರು, ನಿರಂತರವಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದರು.
ಶುಕ್ರವಾರ ಅಂತ್ಯಕ್ರಿಯೆ: ಮೃತರ ಅಂತ್ಯಕ್ರಿಯೆ ಅವರ ಕರ್ಮಭೂಮಿಯಾಗಿರುವ ಕೊರಟಗೆರೆ ತಾಲೂಕಿನ ಹೊಲವನಹಳ್ಳಿ ಜಮೀನಿನಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಬಿರು ಬಿಸಿಲಿಗೆ ಕಾದು ಕೆಂಡದಂತಾಗಿದ್ದ ರಾಜಧಾನಿಗೆ ತಂಪೆರೆದ ಮಳೆರಾಯ: ಬೆಂಗಳೂರು ಮಂದಿ ಫುಲ್​ ಖುಷ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eleven =
Remember me
