ಬೆಂಗಳೂರು: ಇಂದು ಬೆಂಗಳೂರಿನ ಲಕ್ಕಸಂದ್ರದ ಮೆಟ್ರೋ ಸುರಂಗ ಕಾಮಗಾರಿ ಸ್ಥಳಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ಮೆಟ್ರೋ ಸುರಂಗ ಮಾರ್ಗ ಕಾಮಗಾರಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:CEO ಕೆಲಸ ತೊರೆದು ಟ್ರಕ್ ಡ್ರೈವರ್ ಆದ ವ್ಯಕ್ತಿ ಕ್ಯಾನ್ಸರ್ ಸೋಲಿಸಿದರು
ಮೆಟ್ರೋ ಸುರಂಗ ಪರಿಶೀಲಿಸಿದ ಬಳಿಕ ಮಾತನಾಡಿದ ಡಿಸಿಎಂ, “ಕಾಮಗಾರಿ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಣ್ಣಲ್ಲಿ ಸಾಧಕ ಭಾದಕಗಳನ್ನು ನೋಡಬೇಕಲ್ವೇ, ಹಾಗಾಗಿ ಖುದ್ದಾಗಿ ಕಾಮಗಾರಿ ವೀಕ್ಷಿಸಲು ನಾನೇ ಆಗಮಿಸಿದೆ. 20.9 ಕಿ.ಮೀ ಸುರಂಗ ಮಾರ್ಗವಾಗುತ್ತಿದೆ. ಇದರಲ್ಲಿ ಒಟ್ಟು 18 ನಿಲ್ದಾಣಗಳು ಬರಲಿದೆ. 4 ಪ್ಯಾಕೇಜ್​​ನಲ್ಲಿ ಯೋಜನೆ ತೆಗೆದುಕೊಳ್ಳಲಾಗಿದೆ. ಸದ್ಯ ಕಾಮಗಾರಿಯ 70% ನಷ್ಟು ಕೆಲಸ ಈಗಾಗಲೇ ಮುಗಿದಿದ್ದು, 2025ಕ್ಕೆ ಕಾಮಗಾರಿ ಸಂಪೂರ್ಣಗೊಳ್ಳಲಿದೆ” ಎಂದು ಹೇಳಿದರು.
“ಪ್ರಕೃತಿ, ತಂತ್ರಜ್ಞಾನ, ಸರ್ಕಾರ, ಸಹಕಾರ ಕೊಟ್ಟಾಗ ಯೋಜನೆ ಸಾಧ್ಯವಾಗಲಿದೆ. ಬೆಂಗಳೂರಿನಲ್ಲಿ ನಾವು ದೊಡ್ಡ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಟ್ರಾಫಿಕ್ ಕಡಿಮೆ ಮಾಡಲು ಬ್ರಾಂಡ್ ಬೆಂಗಳೂರಿಗಾಗಿ ಯೋಜನೆ ರೂಪಿಸಿದ್ದೇವೆ. ಟ್ರಾಫಿಕ್ ಕಡಿಮೆಯಾಗಿ ಮೆಟ್ರೋ ಬಳಕೆಯಾಗಬೇಕು ಆ ರೀತಿಯಂತೆ ಇದು ಪ್ರಗತಿಯಾಗಬೇಕು ಎಂಬುದು ನಮ್ಮ ಉದ್ದೇಶ” ಎಂದು ಡಿ.ಕೆ. ಶಿವಕುಮಾರ್​ ಹೇಳಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 11 =
Remember me
