ಬೆಂಗಳೂರು:ಈ ಬಾರಿ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ತಡವಾಗಿ ಆಗಮಿಸಲಿದೆ. ಜೂನ್ ಎರಡನೇ ವಾರದಲ್ಲಿ ರಾಜ್ಯಕ್ಕೆ ಮಾರುತಗಳು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂದಾಜಿಸಿದೆ.
ವಾಡಿಕೆಯಂತೆ ಜೂ. 1 ಅಥವಾ ಜೂ. 2ರಂದು ಕೇರಳಕ್ಕೆ ಆಗಮಿಸಿದ ಮಾರುತಗಳು ಮೂರ್ನಾಲ್ಕು ದಿನಗಳ ಬಳಿಕ ಕರ್ನಾಟಕಕ್ಕೆ ಪ್ರವೇಶಿಸುತ್ತವೆ. ಆದರೆ, ಮುಂಗಾರು ಪೂರ್ವದಲ್ಲಿ ಉಂಟಾಗಿದ್ದ ತೇವಾಂಶ ಕೊರತೆ, ಗಾಳಿ ವೇಗ ಇಲ್ಲದಿರುವುದು ಹಾಗೂ ಮೋಕಾ ಚಂಡಮಾರುತದಿಂದಾಗಿ ತೇವಾಂಶ ಭರಿತ ಮೋಡಗಳನ್ನು ಸೆಳೆತ ಸೇರಿ ಇತರೆ ಕಾರಣಗಳಿಂದ ವಾಡಿಕೆಯಂತೆ ಆಗಮನವಾಗಬೇಕಿದ್ದ ಮಾರುತಗಳು ಮೇಲೆ ಪರಿಣಾಮ ಬೀರಿದೆ.
ಇದನ್ನೂ ಓದಿ:ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!
ಶನಿವಾರ ಅಂಡಮಾನ್‌ನಲ್ಲಿ ಮುಂಗಾರು ಸಂಬಂಧ ಹವಾಗುಣ ಸೃಷ್ಟಿಯಾದರೂ ಮಾರುತಗಳು ದುರ್ಬಲಗೊಂಡಿವೆ. ಸದ್ಯದಲ್ಲೇ ಮಾರುತಗಳು ರೂಪುಗೊಳ್ಳಲು ಪೂರಕ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಲಿಕಲ್ಲು ಮಳೆ ಆರ್ಭಟ:ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆ ಬಿದ್ದಿದೆ. ಶನಿವಾರ ಕೆಲವೆಡೆ ಗುಡುಗು, ಸಿಡಿಲು ಮಳೆ ಅಬ್ಬರ ಜೋರಾಗಿತ್ತು. ದಿಢೀರ್ ಮಳೆಯಿಂದಾಗಿ ರಸ್ತೆ ಬದಿ ವ್ಯಾಪಾರಿಗಳು ಹಾಗೂ ಸವಾರರು ಪರದಾಡುವಂತಾಯಿತು. ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಇದನ್ನೂ ಓದಿ:ನಿರುದ್ಯೋಗಿಗಳಿಗೆ ಯುವನಿಧಿ: ಆದೇಶ ಮಾಡೇಬಿಟ್ಟ ಸರ್ಕಾರ; ಈ ಗ್ಯಾರಂಟಿಗೆ ಷರತ್ತುಗಳೇನು?
ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 21ರಿಂದ ಮೇ 25ರವರೆಗೆ ಮಳೆ ಬೀಳಲಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮೇ 23ರಿಂದ ಮುಂದಿನ ಮೂರು ದಿನ ಹಾಗೂ ಬಾಗಲಕೋಟೆ, ಬೀದರ್, ಗದಗ ಮತ್ತು ಕಲಬುರಗಿಯಲ್ಲಿ ಮೇ 23ರಂದು ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
‘ಗೃಹಜ್ಯೋತಿ’ಯೂ ಗ್ಯಾರಂಟಿ: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಖಚಿತ ಎಂದು ಸರ್ಕಾರಿ ಆದೇಶ

ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
