ಬೆಂಗಳೂರು :ಹಗರಣದ ಹಿನ್ನೆಲೆಯಲ್ಲಿ ನಗರದ ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್​ನಲ್ಲಿ ಸಿಕ್ಕಿಹಾಕಿಕೊಂಡಿರುವ ತಮ್ಮ ಹಣ ಹಿಂಪಡೆಯಲು ಹೋರಾಟ ನಡೆಸುತ್ತಿರುವ ಠೇವಣಿದಾರ‌ರು ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಭೇಟಿ ಮಾಡಿದರು. ವಿತ್ತ ಸಚಿವರ ಬಳಿ ತಮ್ಮ ಅಳಲು ತೋಡಿಕೊಂಡರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರ್ಮಲಾ ಅವರು, ಗುರು ರಾಘವೇಂದ್ರ ಬ್ಯಾಂಕಿಗೆ ನೇಮಿಸಲಾಗಿರುವ ಆಡಳಿತಾಧಿಕಾರಿ ಆರ್​​ಬಿಐಗೆ ವರದಿ ನೀಡುವವರೆಗೂ ತಾಳ್ಮೆಯಿಂದ ಇರಿ ಎಂದರು. ಪ್ರತಿ ಬಾರಿಯೂ ಪ್ರಧಾನಿ ಮೋದಿ ಅವರು ಠೇವಣಿದಾರರ ಹಣವನ್ನು ಮರುಪಾವತಿ ಮಾಡುವ ಬಗ್ಗೆ ನನ್ನನ್ನು ಕೇಳುತ್ತಾರೆ.
ಇದನ್ನೂ ಓದಿ:ಹೂಡಿಕೆ ಹಣ ಹಿಂತಿರುಗಿಸುವಂತೆ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರ‌ರ ಪ್ರತಿಭಟನೆ
ಆಡಳಿತಾಧಿಕಾರಿಯ ಮೂಲಕ ಹಣವನ್ನು ನಿಮ್ಮ ಖಾತೆಯಿಂದ ಪಡೆಯುವ ಅವಕಾಶ ಇದೆ ಎಂದು ಠೇವಣಿದಾರರಿಗೆ ಸಮಾಧಾನದ ಮಾತುಗಳನ್ನು ಹೇಳಿದ ನಿರ್ಮಲಾ ಸೀತಾರಾಮನ್, ನಿಮ್ಮೊಂದಿಗೆ ನಾನು ಸಾಕಷ್ಟು ಬಾರಿ ಚರ್ಚೆ ನಡೆಸಿದ್ದೇನೆ. ಆದರೆ ಪೂರ್ಣ ಪ್ರಕ್ರಿಯೆಗಳು ಇಲ್ಲದೆ ಏನು ಮಾಡಲು ಸಾಧ್ಯವಿಲ್ಲ. ಎಲ್ಲರೂ ಪಂಜಾಬ್ ಮಹಾರಾಷ್ಟ್ರ ಆಪರೇಟಿವ್ ಬ್ಯಾಂಕ್ ಬಗ್ಗೆ ಉದಾಹರಣೆ ನೀಡುತ್ತಾರೆ. ಆದರೆ ಅದರಲ್ಲೂ ಸಾಕಷ್ಟು ಸಮಯ ತೆಗೆದುಕೊಂಡಿತ್ತು ಎಂದು ಹೇಳಿದರು.
ಐವರು ಎಲ್​ಇಟಿ ಉಗ್ರವಾದಿಗಳ ಅಂತ್ಯ; ಓರ್ವ ಸೈನಿಕ ಹುತಾತ್ಮ

ಕೋವಿಶೀಲ್ಡ್​ ಲಸಿಕೆ ಪಡೆದವರಿಗೆ ಗುಡ್​ ನ್ಯೂಸ್​: ಯೂರೋಪಿನ 9 ದೇಶಗಳಲ್ಲಿ ಗ್ರೀನ್​ ಪಾಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 4 =
Remember me
