ಬೆಂಗಳೂರು:ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಾಜಿ ಸಚಿವರು ಹಾಗೂ ಯುವತಿಯೊಬ್ಬಳ ಅಶ್ಲೀಲ ಸಿಡಿ ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ಪ್ರಕರಣದ ಕುರಿತ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.
ಈ ಸಿಡಿ ಪ್ರಕರಣದ ತನಿಖೆ ಜವಾಬ್ದಾರಿ ವಹಿಸಿಕೊಂಡಿದ್ದ ಎಸ್​ಐಟಿ ಹೈಕೋರ್ಟ್​ಗೆ ಮೆಮೋ ಸಲ್ಲಿಸಿದೆ. ಮಾತ್ರವಲ್ಲ ಪ್ರಕರಣದ ತನಿಖೆ ಕೂಡ ಮುಗಿದಿದ್ದು, ಅಂತಿಮ ವರದಿ ಕೂಡ ಸಿದ್ಧವಿದೆ ಎಂಬುದನ್ನು ತಿಳಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಈ ಮಾಹಿತಿಯನ್ನು ಇಂದು ಹೈಕೋರ್ಟ್​ಗೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಸೀಟ್​​ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ
ಈ ನಡುವೆ ಸಿಡಿ ಲೇಡಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದಿರುವುದನ್ನು ಗಮನಿಸಿದ್ದಲ್ಲದೆ, ಅದನ್ನು ಶೀಘ್ರದಲ್ಲೇ ಸಲ್ಲಿಸುವಂತೆ ಯುವತಿ ಪರ ವಕೀಲರಿಗೆ ಸೂಚನೆ ನೀಡಿತು. ಜತೆಗೆ ಮುಂದಿನ ವಿಚಾರಣೆಯನ್ನು ಜುಲೈ 14ರಂದು ನಡೆಸುವುದಾಗಿ ತಿಳಿಸಿದ ಹೈಕೋರ್ಟ್​, ಅಲ್ಲಿಯವರೆಗೂ ಅಂತಿಮ ವರದಿಯನ್ನು ಸಲ್ಲಿಸದಂತೆ ಎಸ್​ಐಟಿ ಪೊಲೀಸರಿಗೆ ಸೂಚನೆ ನೀಡಿತು.
ಈ ಟೀ ಸ್ಟಾಲ್​ನಲ್ಲಿ ಕೋತಿಯೇ ಕ್ಲೀನರ್​; ಅದೆಷ್ಟು ಚೆನ್ನಾಗಿ ತಟ್ಟೆ ತೊಳೆಯುತ್ತಿದೆ ನೋಡಿ..

ಕೋವಿಡ್​ನಿಂದ ಸತ್ತ 75 ದಿನಗಳ ಬಳಿಕ ನಡೆಯಿತು ಶವಸಂಸ್ಕಾರ; ಹಣಕ್ಕಾಗಿ ಹೆಣ ಇಟ್ಕೊಂಡ್ರಾ?

ಎರಡೂ ಡೋಸ್ ಲಸಿಕೆ ಪಡೆದರೆ ಕೋವಿಡ್​ನಿಂದಾಗಿ ಸಾಯದಿರುವ ಸಾಧ್ಯತೆ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
