ಬೆಂಗಳೂರು: ಕಾಂಗ್ರೆಸ್​ನ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿಯೂ ಜಾರಿಗೆ ಬಂದಂತಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮುಂತಾದವರ ಸಮ್ಮುಖದಲ್ಲಿ ಇಂದು ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದೆ. ಅಲ್ಲದೆ ಗ್ಯಾರಂಟಿ ಯೋಜನೆಯಾದ ಇದಕ್ಕೆ ಗೃಹಲಕ್ಷ್ಮಿ ಎಂಬ ಹೆಸರು ಕೊಟ್ಟಿದ್ಯಾರು ಎಂಬುದು ಕೂಡ ಇದೇ ಕಾರ್ಯಕ್ರಮದಲ್ಲಿ ಬಹಿರಂಗಗೊಂಡಿದೆ.
ಇದನ್ನೂ ಓದಿ:ವೇದಗಳನ್ನು ಓದಿದವರು ದೊಡ್ಡವರಲ್ಲ, ವೇದನೆಯನ್ನು ಅರಿತವರು ದೊಡ್ಡವರು: ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಭಾಗ್ಯದ ಲಕ್ಷ್ಮಿ ಬಾರಮ್ಮ, ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ ಎಂದು ಹಾಡು ಕೂಡ ಹೇಳಿ ಸಂಭ್ರಮಿಸಿದರು. ನಾವು ಈ ಕಾರ್ಯಕ್ರಮದಲ್ಲಿ ಹಚ್ಚಿರುವ ಜ್ಯೋತಿ ರಾಜ್ಯದ ಮನೆಯ ಹೆಣ್ಣುಮಕ್ಕಳ ಬದುಕಿನ ಜ್ಯೋತಿ ಎಂದ ಅವರು, ಈ ಯೋಜನೆಗೆ ಗೃಹಲಕ್ಷ್ಮಿ ಎಂಬ ಹೆಸರು ಕೊಟ್ಟಿದ್ದು ನಾನು ಮತ್ತು ಪ್ರಿಯಾಂಕ್ ಖರ್ಗೆ ಎಂದರು.
ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
