ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿ ಸಾರ್ವಭೌಮತ್ವಕ್ಕೆ ಧಕ್ಕೆಯುಂಟು ಮಾಡಿ, ಶಾಂತಿ ಕದಡುವ ನಿರ್ದಿಷ್ಟ ಸಂಘಟನೆಗಳನ್ನು ನಿಷೇಧಿಸಲು ದೇಶದಲ್ಲಿ 2002ರಲ್ಲಿ ಯುಎಪಿಎ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ದೇಶ ವಿರೋಧಿ ಕೃತ್ಯದಲ್ಲಿ ತೊಡಗಿರುವ ನಿರ್ಧಿಷ್ಟ ಸಂಘಟನೆಯನ್ನು ಈ ಕಾಯ್ದೆಯಡಿ ನಿಷೇಧಿಸಲು ಕೇಂದ್ರ ಗೃಹ ಇಲಾಖೆಗೆ ಅಧಿಕಾರ ಇದೆ.
ಆದರೆ, ನಿಷೇಧಕ್ಕೊಳಪಡುವ ಸಂಘಟನೆಯು ದೇಶ ವಿರೋಧಿ ಕೃತ್ಯ ಎಸಗಿರುವುದಕ್ಕೆ ಸಂಬಂಧಿಸಿದ ಬಲವಾದ ಸಾಕ್ಷ್ಯ ಒದಗಿಸಬೇಕಾಗುತ್ತದೆ. ನಿರ್ಧಿಷ್ಟ ಸಂಘಟನೆ ಪದೇಪದೆ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದ್ದರೆ, ಆ ದುಷ್ಕೃತ್ಯಗಳನ್ನು ವರದಿ ಮಾಡಿ ಆಯಾ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯ ಸರ್ಕಾರಕ್ಕೆ ಈ ಸಂಘಟನೆ ನಿಷೇಧಿಸುವಂತೆ ವರದಿ ನೀಡಬೇಕು. ಕೆಲ ವರ್ಷಗಳಿಂದ ನಡೆಸಿದ ಕುಕೃತ್ಯಗಳ ಬಗ್ಗೆ ಸಾಕ್ಷ್ಯ, ದಾಖಲೆ ಸಮೇತ ವರದಿಯಲ್ಲಿ ಉಲ್ಲೇಖಿಸಿರಬೇಕು.
ಇದನ್ನೂ ಓದಿ:VIDEO | ಕೊಹ್ಲಿ-ಅನುಷ್ಕಾ ನಡುವೆ ಜಗಳವಾದರೆ ಮೊದಲು ಸಾರಿ ಕೇಳೋದು ಯಾರು ಗೊತ್ತೇ?
ರಾಜ್ಯ ಗೃಹ ಇಲಾಖೆಯು ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡುತ್ತದೆ. ಸಂಘಟನೆ ಬಗ್ಗೆ ಆಂತರಿಕ ತನಿಖೆ ನಡೆಸಿ ಬಲವಾದ ಸಾಕ್ಷ್ಯ ಸಿಕ್ಕರೆ, ಸಂಘಟನೆ ವಿರುದ್ಧ ವರದಿ ನೀಡಿದ ರಾಜ್ಯದಲ್ಲಿ ಮಾತ್ರ ನಿಷೇಧಿಸಿ ಅಧಿಸೂಚನೆ ಹೊರಡಿಸುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳಾ ಕ್ರಿಕೆಟ್‌ನಲ್ಲಿ ಜರ್ಮನಿ ಪರ ವಿಶ್ವದಾಖಲೆ ಬರೆದ ಕನ್ನಡತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 6 =
Remember me
