ಬೆಂಗಳೂರು:ಗಂಡನ ಕುತ್ತಿಗೆ ಮೇಲೆ ಕಾಲು ಇಟ್ಟು ಪತ್ನಿಯೇ ಕೊಲೆ ಮಾಡಿರುವ ಘಟನೆ ಜೆ.ಜೆ.ನಗರದಲ್ಲಿ ಬೆಳಗಿನ ಜಾವ 3.15ರಲ್ಲಿ ಸಂಭವಿಸಿದೆ.
ಮೋಹನ್(41) ಕೊಲೆಯಾದವ. ಈತನ ಪತ್ನಿ ಪದ್ಮ(37) ಆರೋಪಿ. ಗಂಡ-ಹೆಂಡತಿ ಇಬ್ಬರೂ ಬಿಬಿಎಂಪಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ.
ಬಿಬಿಎಂಪಿಯಲ್ಲಿ ಕಸದ ಆಟೋ ಚಾಲಕನಾಗಿದ್ದ ಮೋಹನ್, ಕುಡಿತಕ್ಕೆ ದಾಸನಾಗಿದ್ದ. ಕುಡಿತ ಚಟ ಬಿಡಿಸುವ ಸಲುವಾಗಿ ಮೋಹನ್​ನನ್ನು ಪುನರ್ ವಸತಿ ಕೇಂದ್ರಕ್ಕೆ ಪತ್ನಿ ಸೇರಿಸಿದ್ದಳು. ಅಲ್ಲಿಂದ ಬಂದ ಬಳಿಕವೂ ಆತ ಕುಡಿಯಲು ಶುರು ಮಾಡಿದ್ದ. ಅಲ್ಲದೆ, ಪತ್ನಿಯ ಶೀಲದ ಮೇಲೆ ಶಂಕಿಸಿ ಜಗಳವಾಡುತಿದ್ದ.
ಭಾನುವಾರ ರಾತ್ರಿಯೂ ಮೋಹನ್​ ಕುಡಿದು ಬಂದಿದ್ದ. ಈ ವೇಳೆ ಮನೆಯಲ್ಲಿ ಮಕ್ಕಳು ಇರಲಿಲ್ಲ. ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಮೋಹನ್ ಕುತ್ತಿಗೆ ಮೇಲೆ ಪತ್ನಿ ಕಾಲಿಟ್ಟು ಉಸಿರುಗಟ್ಟಿಸಿದ್ದಾಳೆ. ಪ್ರಜ್ಞೆ ತಪ್ಪಿದ್ದಾಗ ಅಕ್ಕಪಕ್ಕದವರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದು, ಮಾರ್ಗಮಧ್ಯೆಯೇ ಮೋಹನ್ ಮೃತಪಟ್ಟಿದ್ದ. ಪರಾರಿಯಾಗಿದ್ದ ಪದ್ಮಾಳನ್ನ ಜೆಜೆ ನಗರ ಪೊಲೀಸರು ಹುಡುಕಿ ಬಂಧಿಸಿದ್ದಾರೆ.
ಕುಡುಕರಿಗೆ ಕುಡುಕರಿಂದಲೇ ಹೇಳಿಸಿದ್ದೇವೆ: ರೋಹಿಣಿ ಸಿಂಧೂರಿ

ಪ್ರೀತಿ ಬಲೆಗೆ ಬಿದ್ದ ರೂಪದರ್ಶಿ ಮೇಲೆ 16 ಬಾರಿ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಪ್ರಿಯಕರನ ಮತ್ತೊಂದು ಮುಖ

ಗ್ರಾಮಸ್ಥರ ಮೇಲೆ ಸೇಡು ತೀರಿಸಿಕೊಳ್ಳಲು ಕುಡಿವ ನೀರಿನ ಟ್ಯಾಂಕ್​ಗೆ ವಿಷ ಹಾಕಿದ ಕಿಡಿಗೇಡಿ! ಮುಂದೇನಾಯ್ತು?

VIDEO| ಹಾವಿನ ಜತೆ ಸರಸವಾಡಲು ಹೋದ ಯುವಕ ಸಾವು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × four =
Remember me
