ಬೆಂಗಳೂರು: ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10ರಂದು ಬಂಡೀಪುರದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ.
ರಾಜ್ಯದ ಅರಣ್ಯ ಸಚಿವ  ಈಶ್ವರ ಬಿ ಖಂಡ್ರೆ ಮತ್ತು ಕೇರಳದ ಸಹವರ್ತಿ ಎ.ಕೆ. ಶಶೀಂದ್ರನ್, ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳ ಉನ್ನತ ಅರಣ್ಯಾಧಿಕಾರಿಗಳೂ ಪಾಲ್ಗೊಳ್ಳುತ್ತಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಈ ಮೊದಲ ಅಂತಾರಾಜ್ಯ ಸಮನ್ವಯ ಸಮಿತಿ ಸಭೆ ಇದಾಗಿದೆ.
ಮೂರೂ ರಾಜ್ಯಗಳ ನಡುವೆ ಅರಣ್ಯ ಸಂರಕ್ಷಣೆ, ಕಳ್ಳಬೇಟೆ, ಅರಣ್ಯ ನಾಶ, ವನ್ಯಜೀವಿಗಳ ಸಂಚಾರ ಕುರಿತಂತೆ ಮಾಹಿತಿಯ ವಿನಿಮಯ ಹಾಗೂ ಉತ್ತಮರೂಢಿ, ಜ್ಞಾನ ಮತ್ತು ತಂತ್ರಜ್ಞಾನದ ವಿನಿಮಯಕ್ಕೆ ಹಾಗೂ ನಿರಂತರ ಸಮನ್ವಯಕ್ಕೆ ನಾಂದಿ ಹಾಡಲಿದೆ ಎಂದು ನಿರೀಕ್ಷಿಸಲಾಗಿದೆ.
ಕಳೆದ ನವೆಂಬರ್ ನಲ್ಲಿ ಕರ್ನಾಟಕದ ಹಾಸನ ಜಿಲ್ಲೆ ಬೇಲೂರು ಬಳಿ ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಿ, ಬಂಡೀಪುರ ಅರಣ್ಯದಲ್ಲಿ ಬಿಡಲಾಗಿದ್ದ ಮಖ್ನಾ ಎಂಬ ದಂತರಹಿತ ಗಂಡಾನೆ ಕಳೆದ ತಿಂಗಳು ವೈನಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಂತಾರಾಜ್ಯ ಅರಣ್ಯ ಸಚಿವರ ಸಭೆ ನಡೆಸಿ ಪರಿಹಾರೋಪಾಯಗಳ ಕುರಿತಂತೆ ಮತ್ತು ಈ ನಿಟ್ಟಿನಲ್ಲಿ ಸಮನ್ವಯ ಸಾಧಿಸಲು ಚರ್ಚಿಸುವುದಾಗಿ ಪ್ರಕಟಿಸಿದ್ದರು.
ರಾಜ್ಯ ಸರ್ಕಾರದ ಪ್ರಯತ್ನದಿಂದಾಗಿ ಸಚಿವರ ಮಟ್ಟದ ಈ ಸಭೆ ನಡೆಯುತ್ತಿದ್ದು, ಇದು ಅಂತಾರಾಜ್ಯ ಸಮನ್ವಯ ಮತ್ತು ವನ್ಯಜೀವಿ -ಮಾನವ ಸಂಘರ್ಷ ತಗ್ಗಿಸುವಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
