ಹೊಸಪೇಟೆ( ಹರಪನಹಳ್ಳಿ):ಕೆಲ ವರ್ಷಗಳ ವಿರಾಮದ ಬಳಿಕ ಮತ್ತೆ ರಾಜಕೀಯ ಜೀವನ ಪುನರಾರಂಭಿಸುವುದಾಗಿ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಘೋಷಿಸಿಕೊಂಡಿದ್ದಾರೆ.
ಹರಪನಹಳ್ಳಿಯ ಎಚ್. ಪಿ.ಎಸ್. ಕಾಲೇಜಿನ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ ಹಾಗೂ ಷಷ್ಠ್ಯಾಬ್ದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 150 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಗೆಲ್ಲುವಂತೆ ಮಾಡುತ್ತೇವೆ. ಇದಕ್ಕೆ ಎಲ್ಲಾ ಕಾರ್ಯತಂತ್ರ ರೂಪಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ಬರುವಂತೆ ಮಾಡುವೆ ಎಂದು ಹೇಳಿದ್ದಾರೆ.
ಶ್ರೀರಾಮುಲು ಸೇರಿ ನಾವು ಮೂವರು ಲಕ್ಷ್ಮಣ, ಭರತ್, ಶತ್ರುಘ್ನನಾದರೇ ನಮ್ಮ ಅಣ್ಣ ಕರುಣಾಕರ ರೆಡ್ಡಿ ಶ್ರೀರಾಮ.1999 ರಲ್ಲಿ ಸುಷ್ಮಾ ಸ್ವರಾಜ್​ ಬಳ್ಳಾರಿಗೆ ಬಂದಾಗ ಜಿಲ್ಲೆಯ ಜನರು ಪ್ರೀತಿ ತೋರಿದರು. ಅದಾದ ಬಳಿಕ ಭಾರತ ರಾಷ್ಟ್ರದ ಇತಿಹಾಸದಲ್ಲಿ 2004 ರಲ್ಲಿ ಕಾಂಗ್ರೆಸ್ ಭದ್ರಕೋಟೆಯನ್ನು ಹೊಡೆದುರುಳಿಸಿ, ಕರುಣಾಕರ ರೆಡ್ಡಿಯನ್ನು ಲೋಕಸಭಾ ಕ್ಷೇತ್ರಕ್ಕೆ ಕಳುಹಿಸಲಾಯಿತು.ನಮ್ಮ ಕುಟುಂಬಕ್ಕೆ ಹಾಗೂ ಹರಪನಹಳ್ಳಿಗೆ ಅವಿನಾಭವ ಸಂಬಂಧವಿದೆ ಎಂದರು
ನಮ್ಮ ತಂದೆ ಪೊಲೀಸ್ ಕಾನಸ್ಟೇಬಲ್ ಆಗಿ ಕೆಲಸ ಮಾಡಿದ್ದಾರೆ.ನಾನು ಕೂಡ ನನ್ನ ಪ್ರಾಥಮಿಕ ಶಿಕ್ಷಣ ಹರಪನಹಳ್ಳಿಯಲ್ಲೇ ಮಾಡಿದ್ದೇ, ನಿಮ್ಮ ಪ್ರೀತಿಗೆ ಮೂಕ ವಿಸ್ಮಿತನಾಗಿದ್ದೇನೆ ಎಂದು ಹೇಳಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
