ಬೆಂಗಳೂರು:ಭಾರತೀಯ ರೈಲ್ವೆ ನಿಯಮಗಳ ಪ್ರಕಾರ ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರು. ಸಾವನ್ನಪ್ಪಿದ ಉದ್ಯೋಗಿಯ ಪತ್ನಿಯರ ನಡುವೆ ಕುಟುಂಬ ಪಿಂಚಣಿಯು ಸಮಾನವಾಗಿ ಹಂಚಿಕೆಯಾಗಲಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.
ಮೊದಲನೇ ಪತ್ನಿ ಮತ್ತು ಆಕೆಯ ಪುತ್ರಿಯರಿಗೆ ಶೇ.50 ಕುಟುಂಬ ಪಿಂಚಣಿ ಮಂಜೂರು ಮಾಡುವಂತೆ ನೈಋತ್ಯ ರೈಲ್ವೆಗೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಾವನ್ನಪ್ಪಿದ ರೈಲ್ವೆ ಉದ್ಯೋಗಿಯ 2ನೇ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಭಾಗಶಃ ಪುರಸ್ಕರಿಸದೆ. ಪಿಂಚಣಿ ಪಾವತಿಸಲು ಯಾವೆಲ್ಲ ನಿಯಮಗಳು ಅನ್ವಯಿಸಲಿವೆಯೋ ಅವುಗಳನ್ನು ಅನ್ವಯಿಸಲಾಗುವುದು. ಉದ್ಯೋಗಿಯ ಹಕ್ಕುಗಳು ಅಥವಾ ಅವರ ಕುಟುಂಬವು ಪಿಂಚಣಿ ನಿಯಮವನ್ನು ಅವಲಂಬಿಸಿರುತ್ತದೆ. ನಿಯಮಗಳು ಇಲ್ಲದಿದ್ದರೆ ಪಿಂಚಣಿ ಇಲ್ಲ. ಒಂದೊಮ್ಮೆ ನಿಯಮಗಳು ಇದ್ದರೆ ಪಿಂಚಣಿಯನ್ನು ನಿಯಮದ ಪ್ರಕಾರ ಪಾವತಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ರೈಲು ಸೇವೆಗಳ (ಪಿಂಚಣಿ) ನಿಯಮಗಳು 1993ಕ್ಕೆ 2016ರಲ್ಲಿ ತಿದ್ದುಪಡಿ ಮಾಡಿ ರೈಲು ಸೇವೆಗಳ (ಪಿಂಚಣಿ) ತಿದ್ದುಪಡಿ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಒಬ್ಬರು ಅಥವಾ ಹೆಚ್ಚು ವಿಧವೆಯರು ಕುಟುಂಬ ಪಿಂಚಣಿ ಪಡೆಯಲು ನಿಯಮದಲ್ಲಿ ಸ್ಪಷ್ಟವಾಗಿ ಹಕ್ಕು ಕಲ್ಪಿಸಲಾಗಿದೆ. ಸಾವನ್ನಪ್ಪಿದ ಉದ್ಯೋಗಿಯ ವಿಧವೆ ಪತ್ನಿಯರಿಗೆ ಪಿಂಚಣಿಯನ್ನು ಸಮಾನವಾಗಿ ಹಂಚಿಕೆ ಮಾಡಲಾಗುತ್ತದೆ. ರೈಲ್ವೆ ಉದ್ಯೋಗಿಗೆ ಒಬ್ಬರಿಗಿಂತ ಹೆಚ್ಚು ಪತ್ನಿಯರಿದ್ದಾಗ ಇದು ಅನ್ವಯಿಸುತ್ತದೆ. ಸಂವಿಧಾನದ ಉದ್ದೇಶಕ್ಕೆ ಪೂರಕವಾಗಿ ನಿಯಮಗಳಿವೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ರೈತರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಿದರೆ ಸುಸ್ಥಿರ ಅಭಿವೃದ್ಧಿ: ಡಾ. ಶಾಲಿನಿ ರಜನೀಶ್ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − one =
Remember me
