ಬೆಂಗಳೂರು:ಮಳೆಯಿಂದಾಗಿ ನೀರು ತುಂಬಿಕೊಂಡಿದ್ದ ಅಂಡರ್​ಪಾಸ್​ನಲ್ಲಿ ಕಾರು ಸಿಕ್ಕಿಕೊಂಡು ತೊಂದರೆಗೀಡಾಗಿ ಅಸ್ವಸ್ಥಗೊಂಡಿದ್ದವರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ಮತ್ತು ಸಿಬ್ಬಂದಿ ಹಿಂದೇಟು ಹಾಕಿದ್ದರಿಂದ ಅವರು ಆಸ್ಪತ್ರೆಯಲ್ಲೇ ಅನ್ಯಾಯವಾಗಿ ಸಾವಿಗೀಡಾಗಿದ್ದಾರೆ. ಸಾವಿಗೀಡಾದ ಮಹಿಳೆ ಇನ್​ಫೊಸಿಸ್ ಉದ್ಯೋಗಿ, ಹೈದರಾಬಾದ್ ಮೂಲದ ಭಾನುರೇಖಾ (22) ಎಂದು ತಿಳಿದುಬಂದಿದೆ.
ಬೆಂಗಳೂರು ಪ್ರವಾಸಕ್ಕೆಂದು ಆಂಧ್ರಪ್ರದೇಶದಿಂದ ಕ್ಯಾಬ್​ನಲ್ಲಿ ಕುಟುಂಬವೊಂದು ಬಂದಿದ್ದು, ಅವರಿದ್ದ ವಾಹನ ಕೆ.ಆರ್​.ಸರ್ಕಲ್ ಬಳಿಯ ಅಂಡರ್​ಪಾಸ್​ನಲ್ಲಿ ಸಿಲುಕಿತ್ತು. ಆಗ ಕ್ಯಾಬ್​ನಲ್ಲಿದ್ದವರು ನೀರಿನಲ್ಲಿ ಮುಳುಗುವ ಭೀತಿಯಿಂದ ಜೋರಾಗಿ ಕಿರುಚಿದ್ದಾರೆ. ಆಗ ಸಾರ್ವಜನಿಕರು ಹಾಗೂ ತಕ್ಷಣಕ್ಕೆ ಧಾವಿಸಿದ್ದ ಅಗ್ನಿಶಾಮಕ ಸಿಬ್ಬಂದಿಯವರು ಒಬ್ಬೊಬ್ಬರನ್ನೇ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ:ಹವಾಮಾನ ಮುನ್ಸೂಚನೆ: ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ?
ಆ ಪೈಕಿ ಅಸ್ವಸ್ಥರಾಗಿದ್ದ ಒಬ್ಬರನ್ನು ಆಟೋದಲ್ಲಿ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆತಂದರೂ ಅಲ್ಲಿದ್ದ ಸಿಬ್ಬಂದಿ ಮತ್ತು ವೈದ್ಯರು ದಾಖಲಿಸಿಕೊಂಡು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ಬಳಿಕ ರೊಚ್ಚಿಗೆದ್ದ ಸಾರ್ವಜನಿಕರೇ ಮಹಿಳೆಯನ್ನು ಸ್ಟ್ರೆಚರ್​​ನಲ್ಲಿ ಮಲಗಿಸಿಕೊಂಡು ಒಳಕ್ಕೆ ಕರೆದೊಯ್ದು ಆಗ್ರಹಪೂರ್ವಕವಾಗಿ ಪರೀಕ್ಷೆ ಮಾಡಿಸಿದ್ದಾರೆ. ಅಷ್ಟರಲ್ಲಾಗಲೇ ಆಕೆ ಸಾವಿಗೀಡಾಗಿದ್ದಾಳೆಂದು ಪಲ್ಸ್ ನೋಡಿದ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಆಸ್ಪತ್ರೆ ಮುಂದೆ ಗೋಗರೆದರೂ ಚಿಕಿತ್ಸೆ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆಗೆ ಪೊಲೀಸರು ಆಗಮಿಸಿದ್ದಾರೆ.
ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್​ ಅಹಮದ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fifteen =
Remember me
