ಕಲಬುರಗಿ: ಹಿರಿಯ ಸಾಹಿತಿ ಗೀತಾ ನಾಗಭೂಷಣ್​ (78) ಇಂದು ಸಂಜೆ 8.30ರ ಹೊತ್ತಿಗೆ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿರುವ ಗೀತಾ ನಾಗಭೂಷಣ್​ ಅವರು ಕಲಬುರಗಿಯ ಸ್ವಸ್ತಿಕ ನಗರದಲ್ಲಿ ವಾಸಿಸುತ್ತಿದ್ದರು. ಇಂದು ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಇದನ್ನೂ ಓದಿ:‘ಅಪ್ಪಾ, ನನಗೆ ಉಸಿರಾಡಲು ಆಗುತ್ತಿಲ್ಲ..’ ಎಂದು ಸಂಕಟ ಪಡುತ್ತ, ಸೆಲ್ಫಿ ವಿಡಿಯೋ ಕಳಿಸಿದವ ಮರುಕ್ಷಣವೇ ಮೃತಪಟ್ಟ
2010ರಲ್ಲಿ ಗದಗದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಇವರ ‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು, ಕೇಂದ್ರ ಸಾಹಿತಿ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಇವರಾಗಿದ್ದಾರೆ.  ಅಷ್ಟೇ ಅಲ್ಲ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿಯಾಗಿದ್ದಾರೆ.
ಕಲಬುರ್ಗಿಯ ಜಿಲ್ಲೆಯ ಹಿಂದುಳಿದ ಪುಟ್ಟ ಹಳ್ಳಿಯಲ್ಲಿ ಮಾರ್ಚ್ 25, 1942ರಲ್ಲಿ ಜನಿಸಿ ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ಗೀತಾ ನಾಗಭೂಷಣರು ಬಡತನ, ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆಗಳನ್ನೆಲ್ಲ ಮೀರಿ, ಬಿ.ಎ, ಬಿ.ಎಡ್, ಎಂ.ಎ ಪದವಿಗಳನ್ನುಗಳಿಸಿ ಅಧ್ಯಾಪಕ ವೃತ್ತಿಯಲ್ಲಿ ತೊಡಗಿಕೊಂಡಿದ್ದರು.ಇದನ್ನೂ ಓದಿ:‘ಚೀನಾ ಹಿಮ್ಮೆಟ್ಟಿಸಲು ಪೂರ್ವ ಲಡಾಖ್​​​ ಗಡಿಯಲ್ಲಿ ಯುದ್ಧ ಘೋಷಣೆಯಾಗಿದೆಯಾ…?’
ಗೀತಾ ನಾಗಭೂಷಣ್​ ಅವರು ಒಟ್ಟು 27 ಕಾದಂಬರಿಗಳನ್ನು ರಚಿಸಿದ್ದಾರೆ. ‘ಹಸಿಮಾಂಸ ಮತ್ತು ಹದ್ದುಗಳು’ ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. 50 ಸಣ್ಣ ಕಥೆಗಳು, ಎರಡು ಸಂಕಲನ, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿಗಳನ್ನು ರಚಿಸಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
‘ನನ್ನನ್ನು ಹುದ್ದೆಯಿಂದ ಕೆಳಗಿಳಿಸಲು ಭಾರತ ಪಿತೂರಿ ನಡೆಸುತ್ತಿದೆ’ ಎಂದು ಆರೋಪಿಸಿದ ನೇಪಾಳ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
