ಮಂಗಳೂರು: ಕನ್ನಡದ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ (89) ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅಮೃತ ಸೋಮೇಶ್ವರ ಅವರು ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿ ಕರ್ನಾಟಕದ ಜನರಿಗೆ ಚಿರಪರಿಚಿತರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟೆಂಬರ್ 27 ರಂದು ಜನಿಸಿದ ಸೋಮೇಶ್ವರ ಅವರು ಪ್ರಾರಂಭಿಕ ಶಿಕ್ಷಣವನ್ನು ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದರು. ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ, ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ.
ಕನ್ನಡ ಸಂಘ, ಯಕ್ಷಗಾನ ಸಂಘ ಆರಂಭಿಸಿ ತುಳು ಭಾಷೆಯ ಬೆಳವಣಿಗೆಗಾಗಿ ಶ್ರಮಿಸಿದ ಅಮೃತ ಸೋಮೇಶ್ವರ ಅವರು ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದರು. ತುಳುನಾಡಿನ ಸಂಸ್ಕ್ರತಿ ಮತ್ತು ಕಲೆಯ ಬಗೆಗೆ ವಿಶೇಷ ಒಲವುಳ್ಳವರು. ಅವರ ಮೊದಲ ಕೃತಿ ‘ಎಲೆಗಿಳಿ’ ಎಂಬ ಸಣ್ಣಕತೆಗಳ ಸoಕಲನ 1957ರಲ್ಲಿ ಪ್ರಕಟವಾಯಿತು.
ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ ಅಮೃತ ಸೋಮೇಶ್ವರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ ಎಂದು ಹಲವು ಸಾಹಿತಿಗಳು, ಲೇಖಕರು ಸಂತಾಪ ವ್ಯಕ್ತಪಡಿಸಿದ್ದಾರೆ.
Petrol-Diesel Rate Today: ಈ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಬದಲಾಗಿದೆ, ಬೆಂಗಳೂರಿನಲ್ಲಿ ಎಷ್ಟಿದೆ?



ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 1 =
Remember me
