ಮಂಗಳೂರು:ಕರ್ನಾಟಕ ಯಕ್ಷಗಾನ ಅಕಾಡೆಮಿಯು ಸರಕಾರದ ನಿಯಮಾನುಸಾರ ಒಬ್ಬ ಗಣ್ಯರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಹಾಗೂ 5 ಜನ ಗಣ್ಯರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಗಳಾದ ಡಿ.ಎಸ್.ಶ್ರೀಧರ್ ಅವರನ್ನು ‘ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಿಗೆ ರೂ .1 ಲಕ್ಷ ನಗದು , ಪ್ರಶಸ್ತಿ ಫಲಕ , ನೀಡಿ ಪುರಸ್ಕರಿಸಲಾಗುವುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
‘ ಗೌರವ ಪ್ರಶಸ್ತಿ’ಗೆ ಬಿ.ಸಂಜೀವ ಸುವರ್ಣ , ಕೆ.ತಿಮ್ಮಪ್ಪ ಗುಜರನ್ , ಡಾ . ವಿಜಯನಳಿನಿ ರಮೇಶ್ , ಡಾ . ಚಕ್ಕೆರೆ ಶಿವಶಂಕರ್ , ಬಿ.ಪರಶುರಾಮ್ ಅವರನ್ನು ಆಯ್ಕೆ ಮಾಡಲಾಯಿತು . ಗೌರವ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ .50,000 ಗಳ ನಗದು , ಪ್ರಶಸ್ತಿ ಫಲಕ , ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಗುವುದು .
ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಗೋಪಾಲ ಆಚಾರ್ಯ ತೀರ್ಥಹಳ್ಳಿ, ಬೇಲೂರು ರಮೇಶ್ , ಆವರ್ಸೆ ಶ್ರೀನಿವಾಸ ಮಡಿವಾಳ , ಹರಿನಾರಾಯಣ ಬೈಪಾಡಿತ್ತಾಯ , ಸಂಜಯ್ ಕುಮಾರ್ ಶೆಟ್ಟಿ , ಎಂ.ಆರ್.ಹೆಗಡೆ ಕಾನಗೋಡ , ಸುಬ್ರಹ್ಮಣ್ಯ ಧಾರೇಶ್ವರ , ವಿಟ್ಲ ಶಂಭು ಶರ್ಮ , ಹನುಮಂತರಾಯಪ್ಪ , ಎ.ಎಂ.ಮುಳವಾಗಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ . ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ .25,000 ನಗದು , ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಗುವುದು .
‘ ಪಾರ್ತಿಸುಬ್ಬ ಪ್ರಶಸ್ತಿ , ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ 2021 ರ ಫೆಬ್ರವರಿ ಎರಡನೇ ಅಥವಾ 3 ನೇ ವಾರದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಅಥವಾ ನಯನ ರಂಗಮಂದಿರದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಪ್ರೊ.ಎಂ.ಎ.ಹೆಗಡೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..

ಕೆಲವರಷ್ಟೇ ಚರ್ಚಾ ಟೇಬಲ್​ನಲ್ಲಿದ್ದರೆ ಜಾಗತಿಕ ಬೆಳವಣಿಗೆಯಾಗದು: ಪ್ರಧಾನಿ ಮೋದಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + two =
Remember me
