ಬೆಂಗಳೂರು:ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರು ಲಿಂಗಾಯತ ನಾಯಕರನ್ನು ಮುಗಿಸಿದಂತೆ ಈಗ ಹಿಂದುಳಿದ ವರ್ಗಗಳ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ಮಂತ್ರಿ ಬದಲಾವಣೆಗೆ ತಂತ್ರ ; ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಗುಸುಗುಸು!
ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಗಳಿದ ವರ್ಗಗಳ ನಾಯಕರನ್ನು ಮುಗಿಸುತ್ತಿದ್ದಾರೆ. ಅವರು ಒಂದಿಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅದೇ ಅವರ ಶಕ್ತಿ ಎಂದು ಯತ್ನಾಳ ಹೇಳಿದ್ದಾರೆ.
ಯತ್ನಾಳರ ಈ ಹೇಳಿಕೆಯನ್ನಿಟ್ಟುಕೊಂಡು ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್​ನಲ್ಲಿ ಯಡಿಯೂರಪ್ಪ ಅವರ ಕಾಲೆಳೆದಿದೆ. BSY ಅವರು ಲಿಂಗಾಯತ ನಾಯಕರನ್ನು ಮುಗಿಸಿದರು, ಈಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸುವ ಕಾರ್ಯಕ್ರಮ ಹಾಕಿದ್ದಾರೆ. ಯಡಿಯೂರಪ್ಪ ಅವರೇ ಯತ್ನಾಳ್ ಹೇಳಿದಂತೆ ಬಿ ಬಿ ಶಿವಪ್ಪನವರಿಂದ ಹಿಡಿದು ಇಂದಿನ ನಾಯಕರವರೆಗೂ ಎಲ್ಲರನ್ನೂ ಮುಗಿಸಿದಿರಿ ಅಲ್ಲವೇ? ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದಿರುವುದು, ಅವರ ಆರೋಪ ಒಪ್ಪಿದಂತೆ! ಎಂದು ಟ್ವೀಟ್ ಮಾಡಿದೆ.
ಯಾವುದೇ ಕಾರಣಕ್ಕೂ ಬಿಎಸ್‌ವೈ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ: ಕೆ.ಎಸ್.ಈಶ್ವರಪ್ಪ

ಹಠಾತ್ತನೇ ಭಾಷಣ ನಿಲ್ಲಿಸಿದ ಮೋದಿ! ವೈದ್ಯರ ತಂಡವನ್ನು ಕರೆದಿದ್ದೇಕೆ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 8 =
Remember me
