ಕಾರವಾರ:ಕಾಂಗ್ರೆಸ್ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರನನ್ನು ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮುಂಡಗೋಡು ಪೊಲೀಸರು ಬಂಧಿಸಿದ್ದಾರೆ.
ಬಾಪುಗೌಡ ಪಾಟೀಲ್ ಬಂಧಿತ ಆರೋಪಿ. ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಹಣದ ವಂಚನೆಯ ಪ್ರಕರಣದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರನನ್ನು ಬಂಧಿಸಲಾಗಿದೆ.
ಎರಡು ಚೆಕ್ ಬೌನ್ಸ್ ಪ್ರಕರಣ ಸೇರಿ ಬಾಪು ಗೌಡ ಪಾಟೀಲ್ ವಿರುದ್ಧ ಸೆಕ್ಷನ್ 353, 141,143, 147, 323, 353, 504, 506,149 ಅಡಿ ಪ್ರಕರಣ ಸಹ ದಾಖಲಾಗಿತ್ತು.
2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ ಕುಡಿದ ಮತ್ತಿನಲ್ಲಿ15 ಜನರ ಜೊತೆ ಸೇರಿ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ನಡೆಸಿದ್ದರು. ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಆರು ತಿಂಗಳಿಂದ ತಲೆಮರೆಸಿಕೊಂಡಿದ್ದ ಬಾಪುಗೌಡ ಪಾಟೀಲ್‌ನನ್ನು ಪೊಲೀಸರು ಶನಿವಾರ ಬಂಧಿಸಿ ಇಂದು ಮುಂಜಾನೆ ಮುಂಡಗೋಡಿನಲ್ಲಿ ನ್ಯಾಯಾಧೀಶರ ಮುಂದೆ ಹಾಜುರುಪಡಿಸಿದ್ದರು.
ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಆರೋಪಿಯನ್ನು ಶಿರಸಿ ಜೈಲಿಗೆ ಕಳುಹಿಸಲಾಗಿದೆ.
ಹಿಂದುಗಳನ್ನು ಕ್ರಿಶ್ಚಿಯನ್ನರನ್ನಾಗಿ ಪರಿವರ್ತಿಸುವ ದಂಧೆ; 2 ಲಕ್ಷ ರೂ. ಆಮಿಷ ಒಡ್ಡಿದ ಇಬ್ಬರು ಅರೆಸ್ಟ್


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
