ಬೆಂಗಳೂರು:ಉತ್ತರ ಭಾರತದಲ್ಲಿ ಮುಂಗಾರು ಪ್ರಬಲವಾಗಿರುವ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ತುಸು ಇಳಿಮುಖವಾಗುತ್ತಿದೆ. ಜತೆಗೆ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಮುರ್ನಾಲ್ಕು ದಿನ ಮುಂದುವರಿಯುವ ಸಾಧ್ಯತೆ ಇದೆ.
ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಬೀದರ್​ ಬಾಗಲಕೋಟೆಯಲ್ಲಿ ಆ.17ರಿಂದ ಮುಂದಿನ ಎರಡು ದಿನ ಬಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ದಕ್ಷಿಣ ಕನ್ನಡ,ಉಡುಪಿ, ಚಿತ್ರದುರ್ಗದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್​ ಇರಲಿದೆ.
ರಾಜ್ಯಾದ್ಯಂತ ವೈದ್ಯರ ಪ್ರತಿಭಟನೆ:ನಾಳೆ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್​
ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಪ್ರಸ್ತುತ ಹವಾಮಾನ ಸ್ಥಿತಿ ಗಮನಿಸಿದರೆ ಆ.20ರಿಂದ ದಕ್ಷಿಣ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕ್ಷೀಣವಾಗಲಿದೆ.
ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾತನಾಡಿ, ಕರಾವಳಿಯಲ್ಲಿ ಆ.18ರಿಂದ ಆ.19ರವರೆಗೆ ಮಳೆ ಇರುವುದಿಲ್ಲ. ಆ.20ರಿಂದ ಮುಂದಿನ 2 ದಿನ ಬಿರುಸಾಗಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಮಾತ್ರ ಇದ್ದರೆ, ಉಳಿದೆಡೆ ಸಾಧಾರಣವಾಗಿ ಸುರಿಯಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + 14 =
Remember me
