ದಾವಣಗೆರೆ:ಜಿಲ್ಲೆಯ ಚನ್ನಗಿರಿಯಲ್ಲಿ ನಿನ್ನೆ ಆನೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದು, ಇಂದು ಕೂಡ ಮತ್ತೆ ಆನೆಗಳು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ.
ಚನ್ನಗಿರಿ ತಾಲೂಕಿನ ತಾಲೂಕಿನ ಸೇವಾ ನಗರದ ಹೊರಭಾಗದಲ್ಲಿ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ನಿನ್ನೆ ಈ ಭಾಗದಲ್ಲಿ ಯುವತಿಯೊಬ್ಬಳನ್ನು ಸಾಯಿಸಿದ್ದ ಆನೆ, ಕೆಲವರನ್ನು ಗಾಯಗೊಳಿಸಿತ್ತು. ಇಂದು ಈಗ ಮತ್ತೆ ಆನೆಗಳು ಕಾಣಿಸಿಕೊಂಡಿದ್ದು, ತೆಂಗಿನ ತೋಟಕ್ಕೆ ದಾಳಿ ಇಟ್ಟು ಬೆಳೆ ನಾಶ ಮಾಡುತ್ತಿವೆ. ಪರಿಣಾಮವಾಗಿ, ಸೇವಾ ನಗರ ಮತ್ತು ಸೂಳೆಕೆರೆ ಸುತ್ತಲಿನ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ:ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್​ನಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ
ಆನೆಗಳನ್ನ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದು, ಅವುಗಳನ್ನು ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ. ಕಾಡಾನೆಗಳನ್ನ ಹಿಡಿಯಲು ಅಂಬಾರಿ ಹೊರುವ ಅರ್ಜುನ ಮತ್ತು ಮಹೇಂದ್ರ ಎಂಬ ಆನೆಗಳ ಬಳಸಿಕೊಳ್ಳಲಾಗಿದೆ. ಒಟ್ಟು ನಾಲ್ಕು ಆನೆಗಳು ಸುತ್ತಮುತ್ತಲ ಭಾಗದಲ್ಲಿ ಓಡಾಡುತ್ತಿರುವ ಶಂಕೆ ಇದೆ.
ಇದನ್ನೂ ಓದಿ:4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?
ಈ ಆನೆಗಳು ಸಕಲೇಶಪುರ ಕಾಡಿನಿಂದ ಇಲ್ಲಿಗೆ ವಲಸೆ ಬಂದಿರುವ ಮಾಹಿತಿ ಇದ್ದು, ಚಿಕ್ಕನಾಯಕನಹಳ್ಳಿ ಹಾಗೂ ಹೊಸದುರ್ಗ ಮೂಲಕ ಸಾಗಿ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೆ ದಾರಿ ತಪ್ಪಿ ಹೊಳಲ್ಕೆರೆ ಮೂಲಕ ಚಿಕ್ಕಜಾಜೂರು, ಸಂತೆಬೆನ್ನೂರು ಕಡೆಗೆ ಬಂದಿರುವ ಶಂಕೆ ಕೂಡ ವ್ಯಕ್ತವಾಗಿದೆ.
ಮದ್ವೆಯಾಗಿ 17 ವರ್ಷಗಳ ಬಳಿಕ ಗೊತ್ತಾಯ್ತು ಇಬ್ಬರ ನಡುವಿನ ಅಸಲಿ ಸಂಬಂಧ!

ಅಪರಿಚಿತರ ಬಳಿ ಲಿಫ್ಟ್ ಕೇಳಿಯೇ ಏಕಾಂಗಿಯಾಗಿ ಇಡೀ ರಾಜ್ಯ ಸುತ್ತಲಾರಂಭಿಸಿದ್ದಾಳೆ ಈ ಯುವತಿ: ಉದ್ದೇಶವಾದರೂ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 9 =
Remember me
