ವಿಜಯನಗರ:ದಾರಿಯಲ್ಲಿ ಫೋನ್​ ಹಿಡಿದು ಮಾತನಾಡಿಕೊಂಡು ಹೋಗುವಾಗ ಹಿಂದಿನಿಂದ ಬಂದು ಮೊಬೈಲ್​ ಕಸಿದುಕೊಂಡು ಹೋದರೆ ಹೇಗಾಗಬಹುದು? ಪ್ರಶ್ನೆ ಮೊಬೈಲ್​ ಬೆಲೆಯದ್ದಲ್ಲ. ಅದರಲ್ಲಿರುವ ಅಮೂಲ್ಯ ಮಾಹಿತಿಯದ್ದು. ಇದೀಗ ಮೊಬೈಲ್​ ಕಳ್ಳತನ ನಡೆಸುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು ಅದೆಷ್ಟೋ ಫೋನುಗಳು ಕಳವಾಗುವುದನ್ನು ತಪ್ಪಿಸಿದ್ದಾರೆ.
ಹೊಸಪೇಟೆ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 94,500 ರೂ. ಬೆಲೆ ಬಾಳುವ 7 ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಮಂಜುನಾಥ್ ಕೊಂಡಕೊಂದಿ( 20) ಅಬ್ದುಲ್ ರೇಹಮಾನ್( 21) ಮತ್ತು ಲೊಕೇಶ್ ( 24) ಬಂಧಿತರು. ಹೊಸಪೇಟೆಯ ಬಸ್ ನಿಲ್ದಾಣದಲ್ಲಿ ಅನೇಕ ಮೊಬೈಲ್ ಕಳ್ಳತನದ ಪ್ರಕರಣದಲ್ಲಿ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಸದ್ಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen + five =
Remember me
