ಹುಬ್ಬಳ್ಳಿ:ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ಇದಕ್ಕೂ ಮುನ್ನ ನಾಡಗೀತೆಯೊಂದಿಗೆ ಕಾರ್ಯಕ್ರಮ ಶುರುವಾಯಿತು. ಹಾವೇರಿಯ ಏಲಕ್ಕಿ ಹಾರ, ಏಲಕ್ಕಿ ಪೇಟ ಹಾಕಿ ಪ್ರಧಾನಿಗಳನ್ನು ವೇದಿಕೆ ಸ್ವಾಗತಿಸಲಾಯಿತು. ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿ, ಧಾರವಾಡದ ಕಸೂತಿ ಕಲೆ ಹೊಂದಿರುವ ಹ್ಯಾಂಡ್ ಲೂಮ್ ಶಾಲು ಮತ್ತು ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಿಸಲಾದ ಧ್ವಜವನ್ನು ಟೀಕ್ ವುಡ್​ನಲ್ಲಿ ಧ್ವಜಕ್ಕೆ ಚೌಕಟ್ಟು ಹಾಕಿರುವ ಫ್ರೇಮ್ ಅನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು.

ಬಳಿಕ ಪಥಸಂಚಲನ ನಡೆಯಿತು. ಯುವ ಜನತೆಯುವ ತಮ್ಮ ರಾಜ್ಯಗಳ ಸಂಸ್ಕೃತಿ ಅನಾವರಣ ಮಾಡಿದರು. ಗ್ಲೋಬಲ್​ ಶಾಲೆ ವಿದ್ಯಾರ್ಥಿಗಳಿಂದ ಅತ್ಯದ್ಭುತವಾಗಿ ಯೋಗ ಪ್ರದರ್ಶನ ನಡೆಯಿತು. ಮಲ್ಲಕಂಬ ಪ್ರದರ್ಶನ ಮೈನವಿರೇಳಿಸುವಂತಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಲ್ಹೋತ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದಾರೆ. ಲಕ್ಷಾಂತರ ಯುವ ಜನತೆ ಪಾಲ್ಗೊಂಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
