ಬೆಂಗಳೂರು:ಮುಂಬೈ ಕೊಳೆಗೇರಿ ಪುನರ್ ವಸತಿ ಪ್ರಾಧಿಕಾರದಿಂದ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗಿರುವ ವಸತಿ ಸಂಕೀರ್ಣವನ್ನು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವೀಕ್ಷಿಸಿದರು.
ಮುಂಬೈ ಅಂಧೇರಿ ಈಸ್ಟ್‌ನಲ್ಲಿರುವ ಸಾಯಿಬಾಬಾ ನಗರದ ಟೀಚರ್ಸ್ ಕಾಲೋನಿಯಲ್ಲಿ ನಿರ್ಮಾಣ ಮಾಡಲಾಗಿರುವ ವಸತಿ ಸಂಕೀರ್ಣ ವೀಕ್ಷಿಸಿ ಮಾಹಿತಿ ಪಡೆದರು. ಮುಂಬೈ ಕೊಳೆಗೇರಿ ಪುನರ್‌ವಸತಿ ಪ್ರಾಧಿಕಾರದಿಂದ ಕೊಳೆಗೇರಿ ಪ್ರದೇಶ ವಾಸಿಗಳ ಸಹಕಾರ ಸಂಘ ಸ್ಥಾಪಿಸಿ ಗುತ್ತಿಗೆದಾರರ ಜತೆ ಒಪ್ಪಂದ ಮಾಡಿಕೊಂಡು ವಸತಿ ಸಂಕೀರ್ಣ ನಿರ್ಮಾಣ ಮಾಡಲಾಗುತ್ತಿದೆ.
ಒಟ್ಟು ಪ್ರದೇಶದ ಶೇ 50 ರಷ್ಟು ಜಾಗ ಗುತ್ತಿಗೆ ಸಂಸ್ಥೆಗೆ ನೀಡಲಾಗುತ್ತದೆ. ಒಂದೊಮ್ಮೆ ಯೋಜನೆಯಡಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲದ ವ್ಯವಸ್ಥೆ ಬೇಕಾದರೂ ಗುತ್ತಿಗೆ ಸಂಸ್ಥೆಯೇ ಬ್ಯಾಂಕ್ ಮುಖ್ಯಸ್ಥರ ಜತೆ ಸಂಪರ್ಕ ಸಾಧಿಸಿ ವ್ಯವಸ್ಥೆ ಮಾಡಿಸುತ್ತದೆ. ಅಷ್ಟೇ ಅಲ್ಲದೆ, ಕೊಳೆಗೇರಿ ಪ್ರದೇಶದಲ್ಲಿ ವಸತಿ ಸಂಕೀರ್ಣ ನಿರ್ಮಾಣ ಮಾಡುವವರೆಗೆ ಅಲ್ಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವುದು ಅಥವಾ ಬೇರೆ ಕಡೆ ವಾಸಿಸಲು ಮನೆ ಬಾಡಿಗೆ ಸಹ ಪಾವತಿಸುತ್ತದೆ.
ಇದೇ ಮಾದರಿ ಕರ್ನಾಟಕದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ಯೋಜನೆಗಳಲ್ಲಿ ಜಾರಿ ಮಾಡಬಹುದೇ ಎಂಬ ಬಗ್ಗೆ ಅಧ್ಯಯನ ನಡೆಸುವಂತೆಯೂ, ಸಾಧಕ- ಬಾಧಕ ಕುರಿತು ಪರಿಶೀಲನೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಬೈ ಕೊಳೆಗೇರಿ ಪುನರ್‌ವಸತಿ ಪ್ರಾಧಿಕಾರದ ಅಧಿಕಾರಿಗಳನ್ನು ಕರ್ನಾಟಕಕ್ಕೆ ಭೇಟಿ ನೀಡುವಂತೆ ಸಚಿವರು ಆಹ್ವಾನ ನೀಡಿದರು.ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಮಾಜಿ ಸಂಸದ ಹರ್ಬನ್ ಸಿಂಗ್, ಪ್ರಾಧಿಕಾರದ ಅಧಿಕಾರಿಗಳಾದ ಆಶೀಶ್ ಚೌದರಿ, ಬಾಲಾಜಿ ಮುಂಡೆ, ಅಭಯ್ ರಾಮ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಚಿವರು ನವಿ ಮುಂಬೈನ ತಲೋಜ ಪ್ರದೇಶದಲ್ಲಿ ಶಿರ್ಕೆ ಸಂಸ್ಥೆಯ ಸಿಮೆಂಟ್ ಪ್ರೀಕಾಸ್ಟ್ ಸೆಂಟರ್ ಹಾಗೂ ವಸತಿ ಸಂಕೀರ್ಣ ವೀಕ್ಷಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
