ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಾಗಿದ್ದ ದಿಶಾ ಸಭೆಗೆ ಆಗಮಿಸುತ್ತಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈರುಳ್ಳಿ ಹಾರ ಹಾಕುವ ಯತ್ನ ವಿಫಲವಾಗಿದೆ.
ಈರುಳ್ಳಿ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್​ ಜಿಲ್ಲಾ ಅಲ್ಪ ಸಂಖ್ಯಾತ ವಿಭಾಗದ ಉಪಾಧ್ಯಕ್ಷೆ ನಗೀನಾ ಭಾನು ಎಂಬುವವರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈರುಳ್ಳಿ ಹಾರ ಹಾಕಲು ಯತ್ನಿಸಿದರು. ಸ್ಥಳದಲ್ಲಿ ಇದ್ದ ಪೊಲೀಸರು ಮಹಿಳೆಯನ್ನು ತಡೆದರು. ಈ ವಿಚಾರವಾಗಿ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಕಾಂಗ್ರೆಸ್​ ಮಹಿಳಾ ಕಾರ್ಯಕರ್ತೆಯರು ಇದೇ ವೇಳೆ ಪಕೋಡ ತಯಾರಿಸಿ ಸಾರ್ವಜನಿಕರಿಗೆ ಹಂಚಿ ಪ್ರತಿಭಟನೆ ನಡೆಸಿದರು.
ಈರುಳ್ಳಿ ಹಾರ ಹಾಕಲು ಯತ್ನಿಸಿದ ಕಾಂಗ್ರೆಸ್​ ನಾಯಕಿಯರು ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 1 =
Remember me
