ಮುಂಬೈ:ದೇಶಾದ್ಯಂತ ಕರೊನಾ ಭೀತಿ ಅತಿಯಾಗಿದ್ದು, ಸದ್ಯದಲ್ಲೇ ದಿನಕ್ಕೆ ಸುಮಾರು 60 ಸಾವಿರ ಮಂದಿ ಸೋಂಕಿತರಾಗಿ ಆಸ್ಪತ್ರೆಗೆ ಸೇರಲಿದ್ದಾರೆ ಎಂಬ ಅಧ್ಯಯನವೊಂದರ ಅಂಶ ಮತ್ತಷ್ಟು ಆತಂಕವನ್ನು ಮೂಡಿಸಿದೆ.
ದೇಶದಲ್ಲಿ ಒಮಿಕ್ರಾನ್ ಅಲೆ ಗರಿಷ್ಠ ಮಟ್ಟ ತಲುಪುವ ವೇಳೆ ದೈನಿಕ ಸುಮಾರು 60,000 ಜನರು ಆಸ್ಪತ್ರೆಗಳಿಗೆ ದಾಖಲಾಗಬಹುದು. ಸದ್ಯ ದೇಶದಲ್ಲಿ ಒಮಿಕ್ರಾನ್ ಪ್ರಭೇದವೇ ಪ್ರಮುಖ ತಳಿಯಾಗಿದ್ದು ಶೀಘ್ರವೇ ಆರೋಗ್ಯ ಬಿಕ್ಕಟ್ಟು ಅಪ್ಪಳಿಸಬಹುದು ಎಂದು ಖಾಸಗಿ ಅಧ್ಯಯನವೊಂದು ಹೇಳಿದೆ.
ಇದನ್ನೂ ಓದಿ:ಹುಡುಗಿ ಮದ್ವೆ ವಯಸ್ಸು ಕನಿಷ್ಠ 21; ಮಸೂದೆ ಪರಿಶೀಲಿಸಬೇಕಾದ 31 ಸದಸ್ಯರ ಸಂಸದೀಯ ಸಮಿತಿಯಲ್ಲಿ ಏಕೈಕ ಸ್ತ್ರೀ!
ಈ ನಡುವೆ ಮಹಾರಾಷ್ಟ್ರದಲ್ಲಿ ಈಗಾಗಲೇ ಪರಿಸ್ಥಿತಿ ಬಿಗಡಾಯಿಸಿದ್ದು ಮುಂಬೈನ ಶಾಲೆಗಳಿಗೆ ಈ ತಿಂಗಳಿಡೀ ರಜೆ ಘೋಷಿಸಲಾಗಿದೆ. ಮುಂಬೈನಲ್ಲಿ 1ರಿಂದ 9ನೇ ತರಗತಿವರೆಗೆ ಜ. 31ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋವಿಡ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದ್ದು, 10-12ನೇ ತರಗತಿಗಳು ಎಂದಿನಂತೆಯೇ ನಡೆಯಲಿವೆ ಎಂದು ಬೃಹನ್ಮುಂಬೈ ಮುನಿಸಿಪಲ್​ ಕಾರ್ಪೋರೇಷನ್​ (ಬಿಎಂಸಿ) ತಿಳಿಸಿದೆ.
ತಗ್ಗದ ಕುಗ್ಗದ ಅಪ್ಪು ಅಭಿಮಾನ; ಪುನೀತ್ ಪುಣ್ಯಭೂಮಿ ಬಳಿ 2 ತಿಂಗಳ ಬಳಿಕವೂ ಜಮಾಯಿಸುತ್ತಿರುವ ಜನರು!
Sign in to your account
Please enter an answer in digits:nineteen − 5 =
Remember me
