ಗಾಂಧಿನಗರ: ಕೇಂದ್ರ ಸರ್ಕಾರ ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ 10 ಸಾವಿರ ರೂ. ಮುಂಗಡ ಹಣ ನೀಡುವುದಾಗಿ ಘೋಷಿಸಿತ್ತು. ಇದೀಗ ರಾಜ್ಯ ಸರ್ಕಾರ ಕೂಡ ಅದೇ ಹಾದಿಯಲ್ಲಿ ಸಾಗಿದ್ದು, ರಾಜ್ಯ ಸರ್ಕಾರಿ ನೌಕರರಿಗೆ 10 ಸಾವಿರ ರೂ. ಮುಂಗಡ ಹಣ ನೀಡುವುದಾಗಿ ಹೇಳಿದೆ.
ಇದರಿಂದ ರಾಜ್ಯದ 5 ಲಕ್ಷ ಸರ್ಕಾರಿ ನೌಕರರು ದೀಪಾವಳಿ ಹಬ್ಬಕ್ಕೆ ಬಡ್ಡಿರಹಿತವಾಗಿ 10 ಸಾವಿರ ರೂ. ಹಬ್ಬದ ಮುಂಗಡ ಪಡೆಯಬಹುದು ಎಂಬುದಾಗಿ ಹೇಳುವ ಮೂಲಕ ಗುಜರಾತ್​ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ರಾಜ್ಯದ ನೌಕರರಿಗೆ ಹಬ್ಬದ ಸಂದರ್ಭದಲ್ಲಿ ಸಂತಸದ ಸುದ್ದಿಯನ್ನು ನೀಡಿದ್ದಾರೆ.
ಡಿಜಿಟಲ್ ವ್ಯವಹಾರವನ್ನು ಉತ್ತೇಜಿಸುವ ಸಲುವಾಗಿ ಈ ಹಣವನ್ನು ಪೇ ಕಾರ್ಡ್​ ಮೂಲಕ ನೀಡಲಾಗುವುದು. ನೌಕರರು ಇದನ್ನು ಹತ್ತು ತಿಂಗಳ ಕಂತಿನಲ್ಲಿ ಮರು ಪಾವತಿಸಬೇಕು ಎಂಬುದಾಗಿ ಅವರು ಹೇಳಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 1 =
Remember me
