ಮೈಸೂರು :ಉತ್ತರಾಖಂಡದ ಕೇದಾರನಾಥದಲ್ಲಿ ಸ್ಥಾಪನೆಯಾಗಲಿರುವ 12 ಅಡಿ ಎತ್ತರದ ಆದಿಗುರು ಶ್ರೀ ಶಂಕರಾಚಾರ್ಯರ ಪ್ರತಿಮೆಯನ್ನು ಮೈಸೂರು ನಗರದ ಶಿಲ್ಪಿಗಳು ಸಿದ್ಧಗೊಳಿಸಿದ್ದಾರೆ. ಕಲಾವಿದ ಅರುಣ ಯೋಗಿರಾಜ್​ ಮತ್ತು ಅವರ 9 ಸಹಾಯಕರು ಕೆತ್ತಿರುವ ಈ ಪ್ರತಿಮೆಯನ್ನು ಜೂನ್ 17 ರಂದು ಟ್ರಕ್​ನಲ್ಲಿ ಕೇದಾರನಾಥಕ್ಕೆ ಸಾಗಿಸಲಾಗುವುದು.
ಕೇದಾರನಾಥದಲ್ಲಿರುವ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ‘ಶ್ರೀ ಶಂಕರಾಚಾರ್ಯ ಅಧ್ಯಯನ ಪೀಠ ಮತ್ತು ಸಂಗ್ರಹಾಲಯ’ವನ್ನು ನಿರ್ಮಿಸಲು ಪ್ರಸ್ತಾವಿಸಲಾಗಿದೆ. ಈ ಸ್ಥಳದಲ್ಲಿ ಈ ಮೂರ್ತಿಯನ್ನು ಸ್ಥಾಪಿಸಲಾಗುವುದು. ಇದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾಗಿದ್ದು, ಕರ್ನಾಟಕದ ನಾಲ್ಕು ಆಸಕ್ತ ಶಿಲ್ಪಿಗಳಲ್ಲಿ ಯೋಗಿರಾಜ್​ ಅವರನ್ನು ಇದಕ್ಕಾಗಿ ಆಯ್ಕೆ ಮಾಡಲಾಗಿತ್ತು. ಸೆಪ್ಟೆಂಬರ್ 2020 ರಲ್ಲಿ ವರ್ಕ್​ ಆರ್ಡರ್​ ಬಂದ ಮೇಲೆ ಕೆತ್ತನೆ ಆರಂಭವಾಯಿತು ಎನ್ನಲಾಗಿದೆ.
ಇದನ್ನೂ ಓದಿ:ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ತಲುಪಿಸಲು ಡ್ರೋನ್​
ಆದಿ ಶಂಕರಾಚಾರ್ಯರು ಪದ್ಮಾಸನದಲ್ಲಿ ಕುಳಿತಿರುವಂತೆ ಚಿತ್ರಿಸಲಾಗಿರುವ ಈ ಮೂರ್ತಿಯ ಕೆಲಸ, ಕಳೆದ 7 ತಿಂಗಳಿಂದ ನಡೆಯುತ್ತಿದೆ. ಬೇಲೂರು-ಹಳೇಬೀಡು ದೇವಾಲಯಗಳಲ್ಲಿ ಬಳಸಲಾಗಿರುವ ಕೃಷ್ಣಶಿಲೆಯನ್ನು ಬಳಸಿ ಈ ಮೂರ್ತಿಯನ್ನು ಕೆತ್ತಲಾಗಿದ್ದು, ಬಿಸಿಲು-ಮಳೆಗಳಿಂದ ಹಾನಿಯಾಗುವುದಿಲ್ಲ ಎನ್ನಲಾಗಿದೆ.(ಏಜೆನ್ಸೀಸ್)
ಸೋಷಿಯಲಿಸಂ ಕೈಹಿಡಿದ ಮಮತಾ ಬ್ಯಾನರ್ಜಿ! ಬಂಗಾಳದಲ್ಲಲ್ಲ, ತಮಿಳುನಾಡಲ್ಲಿ!

VIDEO | ನೀರುತುಂಬಿದ ರಸ್ತೆಯಲ್ಲಿ ಕೂರಿಸಿ ಕಂಟ್ರಾಕ್ಟರ್​ಗೆ ಕಸದ ಅಭಿಷೇಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
