ಅಮರಾವತಿ:ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 40ಕ್ಕೂ ಅಧಿಕ ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಎರಡು ರೈಲುಗಳ ನಡುವಿನ ಸಂಘರ್ಷದಿಂದ ಈ ಅವಘಡ ಉಂಟಾಗಿದೆ.
ವಿಶಾಖಪಟ್ಟಣ-ಪಾಲಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ-ರಾಯಗಡ ರೈಲುಗಳ ಹಿಂಭಾಗ ಘರ್ಷಣೆಗೆ ಒಳಗಾದ್ದರಿಂದ ಈ ಅವಘಡ ಸಂಭವಿಸಿದೆ. ಈ ಅವಘಡದ ತೀವ್ರತೆಗೆ ರೈಲು ಹಳಿ ತಪ್ಪಿದ್ದು, ಬೋಗಿ ಕಳಚಿಕೊಂಡ ಪ್ರಕರಣವೂ ನಡೆದಿದೆ.
ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Train Accident between Alamanda and Kantakapalle Stations in Vizianagaram-Kottavalasa Rly section of Waltair Division of ECoR in Howrah-Chennai Main Line.@RailMinIndiaHelpline Numbers …👇👇👇pic.twitter.com/ahAgX4Kohd
ವಿಶಾಖಪಟ್ಟಣಂ-ಪಾಲಸ ರೈಲು ಓವರ್​ಹೆಡ್ ಕೇಬಲ್ ಸಂಪರ್ಕ ಕಡಿತಗೊಂಡಿದ್ದರಿಂದ ನಿಂತಿತ್ತು. ನಂತರ ಬಂದ ಇನ್ನೊಂದು ರೈಲು ಅದಕ್ಕೆ ಡಿಕ್ಕಿ ಹೊಡೆದಿದ್ದು, ಮೂರು ಬೋಗಿಗಳು ಹಳಿ ತಪ್ಪಿವೆ. ಸಿಬ್ಬಂದಿಯ ಲೋಪವೂ ಅವಘಡಕ್ಕೆ ಕಾರಣ ಎಂದು ರೈಲ್ವೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಸಂತ್ರಸ್ತರಾದವರ ನೆರವಿಗಾಗಿ ಈಸ್ಟ್ ಕೋಸ್ಟ್​ ರೈಲ್ವೆ ಸಹಾಯವಾಣಿ ಆರಂಭಿಸಿದ್ದು, ತುರ್ತು ಕಾರ್ಯಾಚರಣೆ ಭರದಿಂದ ನಡೆದಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ, ಸಂತಾಪ ಸೂಚಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕೈಗೊಂಡಿದ್ದಾಗಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಸಂತಾಪ ಸೂಚಿಸಿದ್ದು, ಸೂಕ್ತ ಕ್ರಮಕೈಗೊಂಡಿದ್ದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
