ಮುಂಬೈ:ಜನುಮದಿನದಂದೆ ಯುವಕನನ್ನು ಆತನ ಸ್ನೇಹಿತರೆ ಕೊಚ್ಚಿ ಕೊಲೆ ಮಾಡಿರುವ ಘಟನೆ ಮುಂಬೈನ ಗೋವಂಡಿ ಎಂಬ ಪ್ರದೇಶದಲ್ಲಿ ನಡೆದಿದೆ. ಬಿಲ್​ ನೀಡುವ ವಿಚಾರವಾಗಿ ಗುಂಪಿನಲ್ಲಿ ಜಗಳ ಏರ್ಪಟ್ಟಿದ್ದು ಒಬ್ಬರ ದಾರುಣ ಅಂತ್ಯದಲ್ಲಿ ಕೊನೆಗೊಂಡಿದೆ.
ಮೃತ ದುರ್ದೈವಿಯನ್ನು ಶಬ್ಬೀರ್​ ಅನ್ಸಾರಿ​(18) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಮುಂಬೈನ ಶಿವಾಜಿನಗರ ಪೊಲೀಸರು ಇಬ್ಬರು ಅಪ್ರಾಪ್ತ ವಯಸ್ಕರ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ಧಾರೆ. ಬಂಧಿತರನ್ನು ಶಾರುಖ್​(19), ನಿಶಾರ್(22) ಬಂಧಿಸಿ ವಿಚಾರಣೆಗೆ ಒಳಪಡಿಸಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಿವಾಜಿನಗರ ಪೊಲೀಸ್​ ಠಾಣೆಯ ಅಧಿಕಾರಿ ಒಬ್ಬರು ಘಟನೆಯೂ ಮೇ 31ರಂದು ನಡೆದಿದ್ದು ಮೃತ ಯುವಕ ತನ್ನ ಜನ್ಮದಿನದ ಪ್ರಯುಕ್ತ ಸ್ನೇಹಿತರಿಗಾಗಿ ಢಾಭಾದಲ್ಲಿ ಪಾರ್ಟಿ ಆಯೋಜಿಸಿದ್ದ. ಈ ವೇಳೆ ಬಿಲ್​ ಶೇರ್​ ಮಾಡಿಕೊಳ್ಳುವಂತೆ ಮೃತ ಯುವಕ ತನ್ನ ಸ್ನೇಹಿತರ ಬಳಿ ಹೇಳಿದ್ದಾನೆ.
ಇದಕ್ಕೊಪ್ಪದ ಆತನ ಸ್ನೇಹಿತರು ಮೊದಲಿಗೆ ಜಗಳ ತೆಗೆದಿದ್ದಾರೆ. ಬಳಿಕ ಬಿಲ್​ ತಾನೇ ಪಾವತಿಸುವುದಾಗಿ ಹೇಳಿ ಯುವಕ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾನೆ. ಇದಾದ ಕೆಲ ಹೊತ್ತಿನ ಬಳಿಕ ಆರೋಪಿಗಳು ಸಂತ್ರಸ್ತನನ್ನು ಕೇಕ್​ ಕಟ್​ ಮಾಡಿಸುವ ನೆಪದಲ್ಲಿ ಕರೆಸಿಕೊಂಡು ಆತನ ಮೇಲೆ ದಾಳಿ ಮಾಡಿ ಮನಸೋಇಚ್ಛೆ ಚಾಕುವಿನಿಂದ ಇರಿದಿದ್ಧಾರೆ.
ಇದನ್ನೂ ಓದಿ:ಖಾಸಗಿ ಶಾಲೆಯಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ; ವ್ಯಾಪಕ ಖಂಡನೆ
ಕೇಕ್​ ಕಟ್​ ಮಾಡುವ ಚಾಕುವಿನಿಂದ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪ್ರಕರಣ ಸಂಬಂಧ ಅಪ್ರಾಪ್ತ ವಯಸ್ಕರ ಮೊದಲಿಗೆ ಪೊಲೀಸರಿಗೆ ಶರಣಾಗಿದ್ದಾರೆ. ಆ ನಂತರ ಉತ್ತರಪ್ರದೇಶ ಮೂಲದ ಇಬ್ಬರನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ.
ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ನಟನೆಯ ಅಂತಿಮ್​ ಚಿತ್ರವೇ ಇವರಿಗೆ ಕೊಲೆ ಮಾಡಲು ಸ್ಪೂರ್ತಿ ಎಂದು ಹೇಳಿದ್ದಾರೆ. ಅಪ್ರಾಪ್ತ ವಯಸ್ಕರರನ್ನು ಬಾಲ ಅಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದ್ದು ಇನ್ನಿಬ್ಬರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಶಿವಾಜಿನಗರ ಪೊಲೀಸ್​ ಠಾಣೆಯ ಅಧಿಕಾರಿ ತಿಳಿಸಿದ್ಧಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 8 =
Remember me
