ವಯನಾಡು:ತಂದೆಯ ಜತೆ ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ಕೇರಳದ ವಯನಾಡಿನ ಅಂಬಲವ್ಯಾಲದಲ್ಲಿ ಸೋಮವಾರ (ಜು.24) ಬೆಳಗ್ಗೆ ನಡೆದಿದೆ.
ಸೋನಾ (19) ಮೃತ ದುರ್ದೈವಿ. ಈಕೆ ಕುಂಬಳೇರಿ ಕ್ರಷರ್ ಬಳಿ ವಾಸವಾಗಿರುವ ಪುಳುಕುಡಿಯಿಲ್ ವರ್ಗೀಸ್ ಮತ್ತು ಶೀಜಾ ದಂಪತಿಯ ಪುತ್ರಿ. ಮನೆಯ ಸಮೀಪವೇ ಇರುವ ಕೃಷಿ ಉದ್ದೇಶಕ್ಕಾಗಿ ಮಣ್ಣನ್ನು ಅಗೆದು ನಿರ್ಮಾಣ ಮಾಡಿದ್ದ ಹೊಂಡದಲ್ಲಿ ಈ ಘಟನೆ ನಡೆದಿದೆ.
ತಂದೆಯ ಜತೆ ಈಜುವಾಗ ಮಣ್ಣಿನಲ್ಲಿ ಸಿಲುಕಿ, ಅದರಿಂದ ಬಿಡಿಸಿಕೊಳ್ಳಲಾಗದೇ ಸೋನಾ ಕೊನೆಯುಸಿರೆಳೆದಿದ್ದಾಳೆ. ಇದಕ್ಕೂ ಮುನ್ನ ಸ್ಥಳೀಯರಿಗೆ ಈ ಮಾಹಿತಿ ತಿಳಿದು ಸೋನಾಳನ್ನು ಕಾಪಾಡಲು ಸ್ಥಳಕ್ಕೆ ದೌಡಾಯಿಸಿದರೂ ಸಹ ಆಕೆಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ತಂದೆಯಿಂದಲೂ ಮಗಳನ್ನು ಉಳಿಸಿಕೊಳ್ಳಲು ಆಗಲಿಲ್ಲ.
ಇದನ್ನೂ ಓದಿ:ಜ್ಞಾನವಾಪಿ ವೈಜ್ಞಾನಿಕ ಸಮೀಕ್ಷೆಗೆ 2 ದಿನದ ತಡೆ: ಅಲಹಾಬಾದ್ ಹೈಕೋರ್ಟ್​ಗೆ ಸುಪ್ರೀಂ ನಿರ್ದೇಶನ; ಮಸೀದಿ ಸಮಿತಿ ಮೇಲ್ಮನವಿ ವಿಚಾರಣೆ
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಸಂಜೆ 7ರ ಸಮಯದಲ್ಲಿ ಸೋನಾಳ ಮೃತದೇಹವನ್ನು ಹೊಂಡದಿಂದ ತೆಗೆದು, ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಸೋನಾ, ಸುಲ್ತಾನ್​ ಬತೇರಿಯಲ್ಲಿರುವ ಸೆಂಟ್​ ಮೇರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಪೂರ್ವ ವಿದ್ಯಾರ್ಥಿನಿಯಾಗಿದ್ದಳು.
ಪ್ರೀತಿಯಿಂದ ಸಾಕಿ ಸಲುಹಿದ್ದ ಮಗಳ ದುರಂತ ಸಾವು ಕಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸೋನಾಳ ಮೃತದೇಹವನ್ನು ಪಾಲಕರಿಗೆ ಹಸ್ತಾಂತರ ಮಾಡಲಾಗಿದೆ.(ಏಜೆನ್ಸೀಸ್​)
ಲೋಕಾಯುಕ್ತ ಪೊಲೀಸರು​ ದಾಳಿ ಮಾಡ್ತಿದ್ದಂತೆ 5 ಸಾವಿರ ರೂ. ಲಂಚದ ಹಣ ನುಂಗಿದ ಕಂದಾಯ ಅಧಿಕಾರಿ!

ಮಹದಾಯಿಗೆ ಹುಲಿ ಅಡ್ಡಗಾಲು: ಸಂರಕ್ಷಿತ ಪ್ರದೇಶವೆಂದು ಘೋಷಿಸಲು ಗೋವಾಗೆ ಬಾಂಬೆ ಹೈಕೋರ್ಟ್ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 4 =
Remember me
