ಉತ್ತರಪ್ರದೇಶ:ಅಯೋಧ್ಯೆಯ ರಾಮ ಮಂದಿರ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಬಾಂಬ್‌ ಹಾಕುವುದಾಗಿ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ.
ತಹದ್ ಸಿಂಗ್ ಮತ್ತು ಓಂಪ್ರಕಾಶ್ ಬಂಧಿತರು. ಆರೋಪಿಗಳಿಬ್ಬರೂ ಗೊಂಡಾ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಯ ತಂಡವು ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್ ಪ್ರದೇಶದಲ್ಲಿ ತಹರ್ ಸಿಂಗ್ ಮತ್ತು ಓಂಪ್ರಕಾಶ್ ಮಿಶ್ರಾ ಅವರನ್ನು ಬಂಧಿಸಿದೆ.
ಎಸ್ ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಟ್ವಿಟರ್ ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು. ‘@iDevendraOffice ಎಂಬ ಹೆಸರಿನ ಟ್ವಿಟರ್ ಖಾತೆಯ ಪೋಸ್ಟ್ ನಲ್ಲಿ  ಬೆದರಿಕೆ ಹಾಕಿದ್ದರು. ‘[email protected]’ ಮತ್ತು ‘[email protected]’ ಇಮೇಲ್ ಐಡಿಗಳನ್ನು ಬೆದರಿಕೆ ಪೋಸ್ಟ್‌ಗಳನ್ನು ಕಳುಹಿಸಲು ಬಳಸಲಾಗಿದೆ ಎಂದು ಆರಂಭಿಕ ತನಿಖೆ ಬಹಿರಂಗಪಡಿಸಿದೆ ಎಂದು ಎಸ್‌ಟಿಎಫ್ ಅಧಿಕಾರಿಗಳು ಹೇಳಿದ್ದಾರೆ.
ತಹರ್ ಸಿಂಗ್ ವಿವಿಧ ಹೆಸರುಗಳೊಂದಿಗೆ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ. ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಕಂಡುಬಂದಿದೆ. ಇಬ್ಬರೂ ಪ್ಯಾರಾಮೆಡಿಕಲ್ ಇನ್‌ಸ್ಟಿಟ್ಯೂಟ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಯುಪಿ ಪೊಲೀಸರು ಅಲರ್ಟ್ ಆಗಿದ್ದಾರೆ. ಇಮೇಲ್‌ಗಳನ್ನು ಕಳುಹಿಸಿದ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳ ವೈ-ಫೈ ರೂಟರ್ ಮತ್ತು ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಪೋಲೀಸರ ಪ್ರಕಾರ, ಈ ಇಮೇಲ್‌ಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಯ ಅಧಿಕಾರಿ ಎಂದು ಹೇಳಿಕೊಳ್ಳುವ ಜುಬೇರ್ ಖಾನ್ ಎಂಬ ವ್ಯಕ್ತಿಯಿಂದ ಆಯೋಜಿಸಲಾಗಿದೆ ಎಂದು ಹೇಳಲಾಗಿದೆ. ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಪ್ರೆಗ್ನೆನ್ಸಿ ವೇಳೆ ಹೈ ಹೀಲ್ಸ್ ಧರಿಸುವುದು ಸುರಕ್ಷಿತವೇ? ತಜ್ಞರ ಪ್ರಕಾರ ಮಾಹಿತಿ ಇದೆ…

ತಿರುಪತಿಯಲ್ಲಿ ಲಡ್ಡು ಪ್ರಸಾದ, ಆದ್ರೆ ಅಯೋಧ್ಯೆ ಶ್ರೀರಾಮನ ಭಕ್ತರಿಗೆ ಏನನ್ನು ನೀಡಲಿದ್ದಾರೆ ಗೊತ್ತಾ..?

ಬನಿಯನ್, ಶಾರ್ಟ್ಸ್ ಧರಿಸಿ ಅಮೀರ್ ಖಾನ್ ಮಗಳ ಕೈ ಹಿಡಿದ ನೂಪುರ್; ಅಯ್ಯೋ ಇದ್ಯಾವ​ ಸ್ಟೈಲ್ ಗುರು? ಎಂದ್ರು ನೆಟ್ಟಿಗರು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine − 6 =
Remember me
