ನೋಯ್ಡಾ:ಕುಡಿದ ಅಮಲಿನಲ್ಲಿ ವ್ಯಕ್ತಿಗಳಿಬ್ಬರು ಕೇರಳ ರಾಜ್ಯಪಾಲ ಮೊಹಮ್ಮದ್​ ಆರೀಫ್​ ಅವರ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿರುವ ಘಟನೆ ಉತ್ತರಪ್ರದೇಶದ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ.
ಘಟನೆಯೂ ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಸೆಕ್ಟರ್​ 76ರ ಬಳಿ ಇರುವ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಗೌರವ್​ ಸೋಲಂಕಿ, ಮೋನು ಕುಮಾರ್​ ಹಾಗೂ ಮಹೀಂದ್ರಾ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನೋಯ್ಡಾದ ಹೆಚ್ಚುವರಿ ಡಿಸಿಪಿ ಶಕ್ತಿ ಮೋಹನ್​ ಅವಸ್ಥಿ ಕೇರಳದ ರಾಜ್ಯಪಾಲರಾದ ಮೊಹಮ್ಮದ್​ ಆರೀಪ್​ ಸೆಕ್ಟರ್​ 77ರಲ್ಲಿರುವ ಎಕ್ಸ್​ಪ್ರೆಸ್​ ಜೆನಿತ್​ ಸೊಸೈಟಿಯಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ವಾಪಸ್​ ದೆಹಲಿಯತ್ತ ಹೊರಟಿದ್ದರು. 10:45ರ ಸುಮಾರಿಗೆ ಸೆಕ್ಟರ್​ 76ರ ಬಳಿ ಇರುವ ಮೆಟ್ರೋ ನಿಲ್ದಾಣದ ಬಳಿ ಬಂಧಿತ ಆರೋಪಿಗಳಿಬ್ಬರು ಅವರ ಬೆಂಗಾವಲು ವಾಹನಕ್ಕೆ ಅಡ್ಡ ಬರಲು ಶುರು ಮಾಡಿದ್ದಾರೆ.
ಇದನ್ನೂ ಓದಿ:ಪತಿಯನ್ನು ಕೊಲೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಕಾಲುವೆಗೆ ಎಸೆದ ಪತ್ನಿ
ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದುದ್ದನ್ನು ಗಮನಿಸಿದ ಸಿಬ್ಬಂದಿಯೂ ಅಡ್ಡ ಬಾರದಂತೆ ಎರಡು ಬಾರಿ ಕೆಂಪು ಬಾವುಟವನ್ನು ತೋರಿಸಿ ದೂರ ಇರುವಂತೆ ಹೇಳಿದ್ಧಾರೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ತಮ್ಮ ಅತಿರೇಕದ ವರ್ತನೆಯಿಂದ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ಅಲ್ಲೇ ಇದ್ದ ಸಿಬ್ಬಂದಿ ಕೂಡಲೇ ಇದನ್ನು ಗಮನಿಸಿ ಪರಿಶೀಲಿಸಿದಾಗ ಆರೋಪಿಗಳಿಬ್ಬರು ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದು ಕಂಡು ಬಂದಿದೆ. ಬಂಧಿತರ ವಿರುದ್ಧ ಭಾರತ ದಂಡ ಸಂಹಿತೆ(IPC Section) 34, 279, 353, 427, 504ರ ಅಡಿ ಪ್ರಕರಣ ದಾಖಲಿಸಿಕೊಂಡು FIR ಸಿದ್ದಪಡಿಸಲಾಗಿದೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಶಕ್ತಿ ಮೋಹನ್​ ಅವಸ್ಥಿ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 19 =
Remember me
