ನವದೆಹಲಿ: ರಾಷ್ಟ್ರದ ಮೇಲೆ ದಾಳಿ ನಡೆಸಲು ಜೈಷ್–ಎ–ಮೊಹಮದ್ ಉಗ್ರ ಸಂಘಟನೆ ಬಾಲ್​ಕೋಟ್​ನಲ್ಲಿ 27 ಮಂದಿ ಭಯೋತ್ಪಾದಕರಿಗೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ರಾಷ್ಟ್ರದ ವಾಯು ಸೇನೆ ಕಳೆದ ಫೆಬ್ರವರಿಯಲ್ಲಿ ಪಾಕ್​ ಮೇಲೆ ನಡೆಸಿದ ವಾಯು ದಾಳಿಗೆ ಪ್ರತೀಕಾರ ಕೈಗೊಳ್ಳಲು ಬಾಲಕೋಟ್​ನ ಶಿಬಿರದಲ್ಲಿ ತರಬೇತಿ ನೀಡುತ್ತಿದೆ. ಈ ಉಗ್ರರನ್ನು ಭಾರತದ ಮೇಲೆ ದಾಳಿ ನಡೆಸಲು ಬಳಸಿಕೊಳ್ಳಲಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ.
ಭಾರತದ ವಿರುದ್ಧದ ಮುಂದಿನ ದಾಳಿಯ ನೇತೃತ್ವವನ್ನು ಉಗ್ರ ಮೌಲಾನಾ ಮಸೂದ್ ಅಜರ್ ರಕ್ತಸಂಬಂಧಿ ಯೂಸುಫ್ ಅಜರ್ ವಹಿಸಿದ್ದಾನೆ ಎಂಬ ಮಾಹಿತಿ ಪತ್ತೆಯಾಗಿದೆ.
ಶಿಬಿರದಲ್ಲಿ ತರಬೇತಿ ಪಡೆಯುತ್ತಿರುವ 27 ಮಂದಿ ಉಗ್ರರಲ್ಲಿ ಎಂಟು ಮಂದಿ ಪಾಕ್​ ಆಕ್ರಮಿತ ಕಾಶ್ಮೀರದವರು. ಇವರಿಗೆ ಪಾಕ್​ನ ಪಂಜಾಬ್​ ಹಾಗೂ ಅಫ್ಘಾನಿಸ್ತಾನದ ಮೂವರು ತರಬೇತಿ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
