ಆಂಧ್ರಪ್ರದೇಶ:ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮೂರು ಆನೆಗಳು ಸಾವನ್ನಪ್ಪಿರುವ ಘಟನೆ ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದಲ್ಲಿ ನಡೆದಿದೆ.
ಚಿತ್ತೂರು-ಪಲಮನೇರು ರಾಷ್ಟ್ರೀಯ ಹೆದ್ದಾರಿಯ ಅರಣ್ಯ ವಿಭಾಗದ ಸಮೀಪದ ಜಗಮರ್ಲ ಕ್ರಾಸ್‌ನಲ್ಲಿ ರಸ್ತೆ ದಾಟುತ್ತಿದ್ದ ಮೂರು ಆನೆಗಳಿಗೆ ವಾಹನ ಡಿಕ್ಕಿ ಹೊಡೆದಿದೆ. ಮೂರು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪಲಮನೇರು ರಾಷ್ಟ್ರೀಯ ಹೆದ್ದಾರಿ ಕಾಡಾನೆಗಳಿಂದ ಆವೃತವಾಗಿದೆ. ಹೀಗಾಗಿ ಆನೆಗಳು ಗುಂಪು ಗುಂಪಾಗಿ ಆಹಾರಕ್ಕಾಗಿ ಅಲ್ಲಿಗೆ ಹೋಗುತ್ತವೆ. ಕೆಲವೊಮ್ಮೆ ಆನೆಗಳ ಹಿಂಡು ಹಗಲಿನಲ್ಲಿ ರಸ್ತೆಯ ಮೇಲೆ ನಿಲ್ಲುತ್ತವೆ. ಅಂತಹ ಸಮಯದಲ್ಲಿ ಆನೆಗಳು ರಸ್ತೆ ದಾಟಿದ ನಂತರ ವಾಹನ ಸವಾರರು ತಮ್ಮ ವಾಹನಗಳನ್ನು ದೂರದಲ್ಲಿ ನಿಲ್ಲಿಸಿ ಪ್ರಯಾಣ ಮುಂದುವರಿಸುತ್ತಾರೆ. ಆದರೆ, ನಿನ್ನೆ ರಾತ್ರಿ ಚೆನ್ನೈನಿಂದ ತರಕಾರಿ ತುಂಬಿಕೊಂಡು ಬರುತ್ತಿದ್ದ ವಾಹನ  ರಸ್ತೆ ದಾಟುತ್ತಿದ್ದ ಆನೆಗಳಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮೂರು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ಸತ್ತ ಮೂರು ಆನೆಗಳಲ್ಲಿ ಎರಡು ಮರಿ ಆನೆಗಳಿವೆ. ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಚಾಲಕ ಪರಾರಿಯಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಧಗ ಧಗನೆ ಹೊತ್ತಿ ಉರಿದ ಶಾಲಾ ಬಸ್​​; ಅದೃಷ್ಟವಶಾತ್ ಮಕ್ಕಳು ಸೇಫ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − 6 =
Remember me
