ನವದೆಹಲಿ: ಜೆಎನ್​ಯು ಹಿಂಸಾಚಾರ ಪ್ರಕರಣದಲ್ಲಿ ಗಾಯಗೊಂಡ 36 ಜನರಿಗೆ ಚಿಕಿತ್ಸೆ ನೀಡಿ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್​ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೂವತ್ತಾರು ಜನರ ಪೈಕಿ ನಾಲ್ವರು ಜೆಎನ್​ಯುನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು. ಅವರಿಗೆ ಸಣ್ಣ ಪ್ರಮಾಣದ ಗಾಯ ತಲೆಗೆ ಆಗಿದ್ದವು. ಇನ್ನುಳಿದವರಿಗೆ ಮೂಳೆ ಮುರಿತ, ಸ್ನಾಯು ಹರಿದುಹೋಗಿರುವಂಥದ್ದು ಆಗಿತ್ತು. ಎಲ್ಲರಿಗೂ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ.
ಎಲ್ಲರನ್ನೂ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿತ್ತು. ಸೋಮವಾರ ನಸುಕಿನ 2 ಗಂಟೆಗೆ ಬಿಡುಗಡೆ ಮಾಡಲಾಗಿದೆ. ಗಾಯಗೊಂಡವರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 2 =
Remember me
