ಕಲ್ಕತ್ತಾ:ಸಂದೇಶ್​​ಖಾಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಪ್ರಭಾವಿ ನಾಯಕ ಶಹಜಹಾನ್​ ಶೇಖ್​ನನ್ನು ಪಶ್ಚಿಮ ಬಂಗಾಳ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ತಲೆಮರೆಸಿಕೊಂಡ 55 ದಿನಗಳ ಬಳಿಕ ಉತ್ತರ 24 ಪರಗಣ ಜಿಲ್ಲೆಯ ಮಿನಖಾನ್​ ಏರಿಯಾದಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ಕೋರ್ಟ್​ ಅದನ್ನು ತಿರಸ್ಕರಿಸಿದೆ. ಆರೋಪಿಗಳ ಪರ ವಕೀಲರ ಕುರಿತು ಕಟುವಾದ ಮಾತುಗಳನ್ನು ಆಡಿರುವ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ಪೀಠವು ಶೇಖ್​ ಶಹಜಹಾನ್​ ಬಗ್ಗೆ ಯಾವುದೇ ಸಹಾನೂಭೂತಿ ಹೊಂದಿಲ್ಲ ಎಂದು ತಿಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರಿದ್ದ ಏಕಸದಸ್ಯ ಪೀಠವು ಮಿಸ್ಟರ್ ಕೌನ್ಸಿಲ್ (ವಕೀಲ), ಈ ವ್ಯಕ್ತಿಯ -ಶೇಖ್‌ – ವಿರುದ್ಧ ಸುಮಾರು 43 ಪ್ರಕರಣಗಳಿವೆ. ಗಮನದಲ್ಲಿಟ್ಟುಕೊಳ್ಳಿ, ಈಗ ಮುಂದಿನ 10 ವರ್ಷಗಳವರೆಗೆ, ಈ ವ್ಯಕ್ತಿ ನಿಮ್ಮನ್ನು ಬ್ಯುಸಿಯಾಗಿರಿಸುತ್ತಾರೆ. ಮುಂದಿನ 10 ವರ್ಷಗಳವರೆಗೆ ನೀವು ಅವರ ಎಲ್ಲ ಪ್ರಕರಣಗಳನ್ನು ನಿರ್ವಹಿಸಬೇಕಾಗುತ್ತದೆ.
ಇದನ್ನೂ ಓದಿ:ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್
ಆ ವ್ಯಕ್ತಿಯ ಬಗ್ಗೆ ನಮಗೆ ಯಾವುದೇ ಸಹಾನುಭೂತಿ ಇಲ್ಲ. ದಯವಿಟ್ಟು ಸೋಮವಾರ ಬನ್ನಿ, ಈಗ ಅಲ್ಲ. ಮುಂದಿನ 10 ದಿನಗಳ ಕಾಲ ಆರೋಪಿಯನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗುತ್ತಿದೆ ಎಂದು ಹೇಳಿದ ನ್ಯಾಯಾಧೀಶರು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.
ಕಳೆದ ತಿಂಗಳು, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ತಂಡದ ಮೇಲೆ ಗುಂಪು ದಾಳಿಗೆ ನಡೆಸಿದ್ದ ಪ್ರಕರಣದಲ್ಲಿ ಶೇಖ್‌ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಲ್ಲದೆ, ಶೇಖ್‌ ವಿರುದ್ಧ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರದೇಶದ ಆದಿವಾಸಿ, ಬುಡಕಟ್ಟು ಜನರು ಸುಮಾರು 100ಕ್ಕೂ ಹೆಚ್ಚು ದೂರುಗಳನ್ನ ದಾಖಲಿಸಿದ್ದಾರೆ. ಶೇಖ್‌ ಮತ್ತು ಸಹಚರರು ತಮ್ಮ ಭೂಮಿಯನ್ನ ಬಲವಂತವಾಗಿ ಕಸಿದುಕೊಂಡಿದ್ದಾರೆ. ಮನರೇಗಾ ಅಡಿಯಲ್ಲಿ ತಮ್ಮ ದುಡಿಮೆಯ ಹಣವನ್ನೂ ಕಿತ್ತುಕೊಂಡಿದ್ದಾರೆ. ಸಮುದಾಯದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳನ್ನ ಎಸಗಿದ್ದಾರೆ ಎಂದು ದೂರುಗಳಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 6 =
Remember me
