ಚಂಡೀಗಢ:ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500ಕ್ಕೂ ಹೆಚ್ಚು ಮಹಿಳಾ ವಿದ್ಯಾರ್ಥಿಗಳು ಕಾಲೇಜಿನ ಪ್ರಾಧ್ಯಾಪಕರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಎಸಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಪತ್ರ ರವಾನಿಸುವ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಈ ಘಟನೆ ಹರಿಯಾಣದ ಸಿರ್ಸಾದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಇದು ಎಐ ಅಲ್ಲ ಯುಐ!; Uಪೇಂದ್ರ Iಮ್ಯಾಜಿನರಿ ಯೂನಿವರ್ಸ್‌ಗೆ ಸ್ವಾಗತ…
ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದು, ಅವರನ್ನು ಕೂಡಲೇ ಕರ್ತವ್ಯದಿಂದ ಅಮಾನತುಗೊಳಿಸಿ, ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದು, ಪತ್ರದ ಪ್ರತಿಗಳನ್ನು ಉಪಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಇತರರಿಗೆ ಕಳುಹಿಸಿ, ನ್ಯಾಯ ಒದಗಿಸಿ ಎಂದು ಆಗ್ರಹಿಸಿದ್ದಾರೆ.
ಪತ್ರದಲ್ಲಿ ಪ್ರೊಫೆಸರ್ ವಿರುದ್ಧ ಆರೋಪಿಸಿರುವ ವಿದ್ಯಾರ್ಥಿನಿಯರು, “ಕೊಳಕು ಮತ್ತು ಅಶ್ಲೀಲ ಕೃತ್ಯಗಳನ್ನು ಎಸಗುತ್ತಿದ್ದ ಪ್ರೊಫೆಸರ್, ಯುವತಿಯರ ಖಾಸಗಿ ಭಾಗಗಳನ್ನು ಸ್ಪರ್ಶಿಸುತ್ತಿದ್ದ. ತನ್ನ ಕಚೇರಿಗೆ ಕರೆದು, ಬಾತ್ ರೂಂಗೆ ಕರೆದೊಯ್ದು, ಖಾಸಗಿ ಭಾಗಗಳನ್ನು ಮುಟ್ಟುತ್ತಾರೆ ಮತ್ತು ನಮ್ಮೊಂದಿಗೆ ಅಶ್ಲೀಲ ವಿಷಯಗಳನ್ನು ಮಾತಾಡುತ್ತಾರೆ” ಎಂದು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ರೈತರನ್ನು ಮತ್ತೆ ಕಾಡಿದ ಕಾಡಾ ನಿರ್ಧಾರ! – ದಾವಣಗೆರೆ ಜಿಲ್ಲೆಯಲ್ಲಿ ಅಸಮಾಧಾನದ ಹೊಗೆ -74 ದಿನ ಭದ್ರಾ ನೀರು ಹರಿಸಲು ಒತ್ತಡ
ಈ ಘಟನೆ ಕುರಿತು ಮಾಡಿದ ಪ್ರತಿಭಟನೆಗೆ ನೀವು ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಕೂಡ ಹಾಕಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ,(ಏಜೆನ್ಸೀಸ್).
ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಧರ್ಮಪಥ, ರಾಮಪಥದಲ್ಲಿ ಸಂಚರಿಸಲಿವೆ ಹೆಚ್ಚುವರಿ ಎಲೆಕ್ಟ್ರಿಕ್ ಬಸ್!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four − one =
Remember me
