ಒಡಿಶಾ: ಸುಮಾರು 50 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ನದಿಯಲ್ಲಿ ದಿಢೀರ್ ಮಗುಚಿ ಬಿದ್ದಿದೆ. ಅಪಘಾತದಲ್ಲಿ ಏಳು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಝಾರ್ಸುಗುಡಾದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಮೃತರಲ್ಲಿ ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಸೇರಿದ್ದಾರೆ. ಒಡಿಶಾದ ಝಾರ್ಸುಗುಡಾದಲ್ಲಿ ಭಾರೀ ಅಪಘಾತ ಸಂಭವಿಸಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 50 ಮಂದಿ ಪ್ರಯಾಣಿಕರಿದ್ದ ಬೋಟ್ ಮಹಾನದಿಯಲ್ಲಿ ಮಗುಚಿ ಬಿದ್ದಿದೆ. ಈ ಘಟನೆ ಬಳಿಕ ಅಲ್ಲಿದ್ದ ಸ್ಥಳೀಯ ಮೀನುಗಾರರು 40ಕ್ಕೂ ಹೆಚ್ಚು ಜನರ ಪ್ರಾಣ ಉಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಶುಕ್ರವಾರ ಸಂಜೆ ಈ ದಾರುಣ ಘಟನೆ ನಡೆದಿದೆ.
https://twitter.com/ANI/status/1781476928358092859/history
ಈ ಘಟನೆಯಲ್ಲಿ ಇದುವರೆಗೆ ಏಳು ಮಂದಿ ಸಾವನ್ನಪ್ಪಿದ್ದಾರೆ. ನಾಪತ್ತೆಯಾದವರ ಶವಗಳು ಪತ್ತೆಯಾಗಿವೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.
ದೋಣಿ ಪಲ್ಟಿ ಹೊಡೆದು ಇದ್ದಕ್ಕಿದ್ದಂತೆ ನೀರಿಗೆ ಬಿದ್ದಿತು. ಕಿರುಚಾಟ, ಕಿರುಚಾಟ ಕೇಳಿ ಸುತ್ತಮುತ್ತಲ ಜನರು ಸ್ಥಳಕ್ಕೆ ಬಂದರು.  ಸ್ಥಳೀಯ ಮೀನುಗಾರರು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಮಾಹಿತಿ ಪಡೆದ ನಂತರ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ  ಸ್ಕೂಬಾ ಡೈವರ್‌ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಶಿಕ್ಷೆ ಆಗಬೇಕು, ಆದ್ರೆ ನನ್ನ ಮಗ ಫಯಾಜ್​ಗೆ ಪ್ರಪೋಸ್​ ಮಾಡಿದ್ದೆ ನೇಹಾ; ಆರೋಪಿ ತಾಯಿ ಮುಮ್ತಾಜ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eleven =
Remember me
