ತಮಿಳುನಾಡು:ಭಾನುವಾರ (ನ.12) ದೀಪಾವಳಿ ಹಬ್ಬವನ್ನು ದೇಶ ಮತ್ತು ಪ್ರಪಂಚದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜನರು ದೀಪ ಬೆಳಗಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಪರಸ್ಪರ ಶುಭಾಶಯ ಕೋರಿದರು. ಆದರೆ ತಮಿಳುನಾಡು ರಾಜ್ಯದ 7 ಹಳ್ಳಿಗಳು ಮಾತ್ರ ಈ ದೀಪಾವಳಿ ಹಬ್ಬವನ್ನು ಯಾವುದೇ ಶಬ್ದವಿಲ್ಲದೆ ಕೇವಲ ದೀಪಗಳನ್ನು ಬೆಳಗಿಸುವ ಮೂಲಕ ಆಚರಿಸಿದವು.
ಹೌದು, ತಮಿಳುನಾಡಿನ ಈರೋಡ್ ಜಿಲ್ಲೆಯ ಏಳು ಹಳ್ಳಿಗಳಲ್ಲಿ, ಈ ಹಬ್ಬವನ್ನು ಕೇವಲ ದೀಪ ಬೆಳಗಿಸುವ ಮೂಲಕ ಮಾತ್ರ ಆಚರಿಸಲಾಗುತ್ತದೆ. ಅದಕ್ಕೂ ಕಾರಣವಿದೆ ಏಕೆಂದರೆ ಹತ್ತಿರದಲ್ಲೇ ಪಕ್ಷಿಧಾಮವಿದ್ದು, ಇಲ್ಲಿ ಪಕ್ಷಿಗಳ ಸಂರಕ್ಷಣೆಯ ದೃಷ್ಟಿಯಿಂದ ಪಟಾಕಿಗಳನ್ನು ಸಿಡಿಸುವುದಿಲ್ಲ. ಈ ಗ್ರಾಮಗಳು ಈರೋಡ್‌ನಿಂದ 10 ಕಿ.ಮೀ ದೂರದಲ್ಲಿರುವ ವಡಮುಗಂ ವೆಲೋಡೆ ಸುತ್ತಮುತ್ತಲಿದ್ದು, ಇಲ್ಲಿಯೇ ಪಕ್ಷಿಧಾಮವಿದೆ. ಈ ವರ್ಷವೂ ಸೆಲಪ್ಪಂಪಳಯಂ, ವಡಮುಗಂ ವೆಲ್ಲೋಡೆ, ಸೆಮ್ಮಂಡಂಪಳಯಂ, ಕರುಕ್ಕಂಕಟ್ಟು ವಲಸು, ಪುಂಗಂಪಾಡಿ ಮತ್ತು ಇತರ ಎರಡು ಗ್ರಾಮಗಳು ಶಾಂತವಾಗಿ ಆಚರಿಸುವ ಮೂಲಕ ದೀಪಾವಳಿಯ ಗೌರವಾನ್ವಿತ ಸಂಪ್ರದಾಯವನ್ನು ಉಳಿಸಿಕೊಂಡಿವೆ.
22 ವರ್ಷಗಳಿಂದ ನಡೆಯುತ್ತಿದೆ ಮೌನ ದೀಪಾವಳಿಕಳೆದ 22 ವರ್ಷಗಳಿಂದ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸದೆ ಈ ಸಂರಕ್ಷಣಾ ವಿಧಾನವನ್ನು ಅನುಸರಿಸುತ್ತಿದ್ದಾರೆ. ಸಾವಿರಾರು ಸ್ಥಳೀಯ ಜಾತಿಯ ಪಕ್ಷಿಗಳು ಮತ್ತು ಇತರ ಪ್ರದೇಶಗಳಿಂದ ವಲಸೆ ಬರುವ ಪಕ್ಷಿಗಳು ಅಕ್ಟೋಬರ್ ಮತ್ತು ಜನವರಿ ನಡುವೆ ಮೊಟ್ಟೆಗಳನ್ನು ಇಡಲು ಮತ್ತು ಮರಿ ಮಾಡಲು ಅಭಯಾರಣ್ಯಕ್ಕೆ ಭೇಟಿ ನೀಡುತ್ತವೆ.
ದೀಪಾವಳಿ ಸಾಮಾನ್ಯವಾಗಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಬರುವುದರಿಂದ ಪಕ್ಷಿಧಾಮದ ಸುತ್ತಮುತ್ತ ವಾಸಿಸುವ 900 ಕ್ಕೂ ಹೆಚ್ಚು ಕುಟುಂಬಗಳು ಪಕ್ಷಿಗಳ ರಕ್ಷಣೆಯ ದೃಷ್ಟಿಯಿಂದ ಪಟಾಕಿ ಸಿಡಿಸದಿರಲು ನಿರ್ಧರಿಸಿವೆ. ಏಕೆಂದರೆ ಪಕ್ಷಿಗಳು ದೊಡ್ಡ ಶಬ್ದ ಮತ್ತು ಮಾಲಿನ್ಯದಿಂದ ತೊಂದರೆಗಳನ್ನು ಎದುರಿಸುತ್ತಿವೆ.
ಏನು ಹೇಳುತ್ತಾರೆ ಗ್ರಾಮಸ್ಥರು?ಈ ಗ್ರಾಮಗಳಲ್ಲಿ ವಾಸಿಸುವ ಜನರು ದೀಪಾವಳಿಯ ಸಮಯದಲ್ಲಿ ತಮ್ಮ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸಿ, ದೀಪಗಳನ್ನು ಬೆಳಗಿಸುತ್ತಾರೆ ಮತ್ತು ಪಕ್ಷಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಟಾಕಿಗಳನ್ನು ಸಿಡಿಸುವುದಿಲ್ಲ ಎಂದು ಹೇಳುತ್ತಾರೆ.
VIDEO | ಹಿಂದೂ ಸಮುದಾಯದೊಂದಿಗೆ ದೀಪಾವಳಿ ಆಚರಿಸಿದ ನ್ಯೂಯಾರ್ಕ್ ಮೇಯರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 17 =
Remember me
