ನವದೆಹಲಿ: ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ವಿರೋಧಿ ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರ ದಿನೇ ದಿನೇ ಉಲ್ಬಣಿಸಿದ್ದು, ಅಲ್ಲಿರುವ 778ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.
ಇದನ್ನೂ ಓದಿ:ತುಮಕೂರು: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿವೆ ಎಂದು ಎಂಇಎ ಹೇಳಿದೆ. “ಈವರೆಗೂ, 778 ಭಾರತೀಯ ವಿದ್ಯಾರ್ಥಿಗಳು ವಿವಿಧ ಭೂ ಸಾರಿಗೆ ಮೂಲಕ ಭಾರತಕ್ಕೆ ಮರಳಿದ್ದಾರೆ. ಜೊತೆಗೆ, ಹೆಚ್ಚುವರಿಯಾಗಿ ಸುಮಾರು 200 ವಿದ್ಯಾರ್ಥಿಗಳು ಢಾಕಾ ಮತ್ತು ಚಿತ್ತಗಾಂಗ್ ವಿಮಾನ ನಿಲ್ದಾಣಗಳಿಂದ ದೇಶಕ್ಕೆ ಮರಳಿದ್ದಾರೆ” ಎಂದು ಸಚಿವಾಲಯ ತಿಳಿಸಿದೆ.
Around 1000 Indian students have returned to#Indiafrom#Bangladeshas the country is witnessing violent protests.
External Affairs Ministry says, 778 Indian students have returned to India through various land ports.
In addition, around 200 students have returned home by…pic.twitter.com/dT6pzdYuTu
— All India Radio News (@airnewsalerts)July 20, 2024

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರ ದಿನೇ ದಿನೇ ಉಲ್ಬಣಿಸಿದ್ದು, ಈ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 115ಕ್ಕೆ ಏರಿಕೆ ಆಗಿದೆ. ಇನ್ನು ಇಡೀ ದೇಶದಲ್ಲಿ ಕರ್ಫ್ಯೂ ಹೇರಲಾಗಿದೆ.
ಬಾಂಗ್ಲಾದೇಶದಲ್ಲಿ ಸುಮಾರು 15.000 ಭಾರತೀಯ ಪ್ರಜೆಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ಶುಕ್ರವಾರ ಹೇಳಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ಚಿತ್ತಗಾಂಗ್, ರಾಜ್‌ಶಾಹಿ, ಸಿಲ್ಹೆಟ್ ಮತ್ತು ಖುಲ್ನಾದಲ್ಲಿನ ಸಹಾಯಕ ಹೈಕಮಿಷನ್‌ಗಳು ಭಾರತೀಯ ಪ್ರಜೆಗಳನ್ನು ಮನೆಗೆ ವಾಪಸ್​ ಸಹಾಯ ಮಾಡುತ್ತಿವೆ ಎಂದು MEA ಹೇಳಿದೆ.
“ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ, ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಹೈಕಮಿಷನ್ ಮತ್ತು ಸಹಾಯಕ ಹೈಕಮಿಷನ್‌ಗಳು ಕ್ರಮ ಕೈಗೊಂಡಿವೆ ಎಂದು ಪ್ರಕಟಣೆಯಲ್ಲಿ ಹೇಳಿವೆ. “ನಮ್ಮ ನಾಗರಿಕರಿಗೆ ಸುಗಮ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಎಂಇಎ ನಾಗರಿಕ ವಿಮಾನಯಾನ, ವಲಸೆ, ಭೂ ಬಂದರುಗಳು ಮತ್ತು ಬಿಎಸ್​ಎಫ್​ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಅದು ಹೇಳಿದೆ.

ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಉಳಿದಿರುವ 4,000 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಭಾರತೀಯ ಹೈಕಮಿಷನ್ ಮತ್ತು ಸಹಾಯಕ ಹೈಕಮಿಷನ್‌ಗಳು ನಿರಂತವಾಗಿ ಸಂಪರ್ಕದಲ್ಲಿವೆ. ಅವರಿಗೆ ಅಗತ್ಯ ನೆರವು ನೀಡುತ್ತಿವೆ. ಜೊತೆಗೆ ಕೋರಿಕೆಯ ಮೇರೆಗೆ ನೇಪಾಳ ಮತ್ತು ಭೂತಾನ್‌ನ ವಿದ್ಯಾರ್ಥಿಗಳಿಗೆ ಭಾರತದ ಗಿಡ ದಾಟಲು ಸಹಾಯ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.
ಢಾಕಾದಲ್ಲಿನ ಹೈ ಕಮಿಷನ್ ಬಾಂಗ್ಲಾದೇಶದ ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವಾಣಿಜ್ಯ ವಿಮಾನಯಾನ ಸಂಸ್ಥೆಗಳೊಂದಿಗೆ ಢಾಕಾ ಮತ್ತು ಚಿತ್ತಗಾಂಗ್‌ನಿಂದ ಭಾರತಕ್ಕೆ ನಿರಂತರ ವಿಮಾನ ಸೇವೆ ಒದಗಿಸಲು ಸಮನ್ವಯ ಸಾಧಿಸುತ್ತಿದೆ. ಇದರಿಂದ ನಮ್ಮ ಭಾರತೀಯ ಪ್ರಜೆಗಳು ದೇಶಕ್ಕೆ ಮರಳಲು ಬಳಸಬಹುದು ಎಂದು ಹೇಳಿದೆ.
ಬಾಂಗ್ಲಾದಲ್ಲಿ ಮೀಸಲಾತಿ ಹಿಂಸಾಚಾರ: 15 ಸಾವಿರ ವಿದ್ಯಾರ್ಥಿಗಳು ಸುರಕ್ಷಿತ ಎಂದ ಭಾರತ ವಿದೇಶಾಂಗ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 4 =
Remember me
