ನವದೆಹಲಿ:ಭಾರತದಲ್ಲಿ ಸರಿಯಾದ ಸಮಯಕ್ಕೆ ಲಾಕ್​ಡೌನ್ ಘೋಷಿಸಿದ್ದರಿಂದ ಕರೊನಾ ಸೋಂಕು ನಿಯಂತ್ರಣದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ. ಲಾಕ್​ಡೌನ್​ನಿಂದಾಗಿ 14-29 ಲಕ್ಷ ಜನರಿಗೆ ಸೋಂಕು ಪಸರಿಸುವುದು ತಪ್ಪಿದೆ ಮತ್ತು ಸುಮಾರು 78 ಸಾವಿರ ಜನರು ಸಾವಿನಿಂದ ಪಾರಾಗಿದ್ದಾರೆ. ದೇಶದಲ್ಲಿ 10 ಲಕ್ಷಕ್ಕೆ 3,328 ಜನರು ಸೋಂಕಿಗೆ ತುತ್ತಾಗುತ್ತಿದ್ದು, 55 ಜನರು ಮೃತರಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಭಾರತದಲ್ಲಿ ಭಾನುವಾರ 92 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 48 ಲಕ್ಷದ ಗಡಿ ದಾಟಿದೆ. 24 ಗಂಟೆಗಳಲ್ಲಿ 1,136 ಜನರು ಮೃತರಾಗಿದ್ದು, ಮೃತರ ಸಂಖ್ಯೆ 80 ಸಾವಿರದ ಸನಿಹಕ್ಕೆ ಬಂದಿದೆ. ಒಂದೇ ದಿನದಲ್ಲಿ 77,700ಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದು, ಒಟ್ಟು 37.80 ಲಕ್ಷದಷ್ಟಾಗಿದೆ. ಚೇತರಿಕೆ ಪ್ರಮಾಣವು ಶೇ. 78ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಇದನ್ನೂ ಓದಿ:ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿಗೆ ಸಿಬಿಐ ಭೀತಿ
2024ವರೆಗೆ ಎಲ್ಲರಿಗೂ ಔಷಧ ಸಿಗುವುದಿಲ್ಲ:ಮುಂದಿನ ವರ್ಷದ ಆರಂಭದೊಳಗೆ ಕರೊನಾ ಔಷಧ ಸಿದ್ಧವಾದರೂ 2024ರೊಳಗೆ ಇದು ಎಲ್ಲರಿಗೂ ಲಭ್ಯವಾಗಲು ಸಾಧ್ಯವಿಲ್ಲ ಎಂದು ಸೇರಂ ಇನ್​ಸ್ಟಿಟ್ಯೂಟ್​ನ ಮುಖ್ಯಸ್ಥ ಅದಾರ್ ಪೂನಾವಲ್ಲಾ ತಿಳಿಸಿದ್ದಾರೆ.
ಕರೊನಾ ವಿಚಾರ ದಲ್ಲಿ ಪ್ರಧಾನಿ ಅವರ ಆತ್ಮನಿರ್ಭರ ಭಾರತ ವೆಂದರೆ ನಿಮ್ಮ ಜೀವವನ್ನು ನೀವೇ ರಕ್ಷಿಸಿಕೊಳ್ಳಬೇಕು ಎಂದು. ಏಕೆಂದರೆ ಅವರು ನವಿಲಿನೊಂದಿಗೆ ಕಾಲ ಕಳೆಯುವುದರಲ್ಲಿ ನಿರತರಾಗಿದ್ದಾರೆ.
| ರಾಹುಲ್ ಗಾಂಧಿಕಾಂಗ್ರೆಸ್ ನಾಯಕ
ವಿಶ್ವದಲ್ಲಿ ಅತಿ ಹೆಚ್ಚು ಕರೊನಾ ಪರೀಕ್ಷೆ ಮಾಡಿರುವ ದೇಶಗಳಲ್ಲಿ ಅಮೆರಿಕ ಮೊದಲನೇ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ. ಈ ವಿಚಾರವಾಗಿ ಮೋದಿಯವರು ನಮ್ಮ ದೇಶವನ್ನು ಹೊಗಳಿದ್ದಾರೆ.
| ಡೊನಾಲ್ಡ್ ಟ್ರಂಪ್ಅಮೆರಿಕ ಅಧ್ಯಕ್ಷ
ಭಾರತದಲ್ಲಿ ಕಂಡುಬಂತಾ ಮಾನವ ಮುಖ ಹೋಲುವ ವಿಚಿತ್ರ ಪ್ರಾಣಿ? ಫ್ಯಾಕ್ಟ್​ಚೆಕ್​ನಲ್ಲಿ ಬಯಲಾದ ಸತ್ಯವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eight =
Remember me
